ಬೆಂಗಳೂರು: 2020-21 ನೇ ಸಾಲಿನ ರಾಜ್ಯ ಮಟ್ಟದ ಎನ್ಎಸ್ಎಸ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.
2020-21 ನೇ ಸಾಲಿನ ಎನ್ಎಸ್ಎಸ್ ರಾಜ್ಯ ಮಟ್ಟದ ಪ್ರಶಸ್ತಿಗೆ 2 ಅತ್ಯುತ್ತಮ ವಿಶ್ವವಿದ್ಯಾಲಯ, 12 ಅತ್ಯುತ್ತಮ ಘಟಕ ಹಾಗೂ ಕಾರ್ಯಕ್ರಮ ಸಂಯೋಜನಾಧಿಕಾರಿಗಳು ಮತ್ತು 12 ಅತ್ಯುತ್ತಮ ಸ್ವಯಂಸೇವಕ/ಸೇವಕಿಯರನ್ನು ಗುರುತಿಸಿ, ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಅಭಿವೃದ್ಧಿ, ಸಮಾಜದ ಒಳಿತಿಗೆ NSS ಮೂಲಕ ಶ್ರಮಿಸುತ್ತಿರುವವರ ಸೇವೆಯನ್ನು ಪರಿಗಣಿಸಿ ಅತ್ಯುತ್ತಮ ವಿಶ್ವವಿದ್ಯಾಲಯ, ಕಾರ್ಯಕ್ರಮ ಅಧಿಕಾರಿ ಹಾಗೂ ಸ್ವಯಂ ಸೇವಕ/ಸೇವಕಿಯರನ್ನು ಗುರುತಿಸಲಾಗಿದೆ. ಸೆಪ್ಟೆಂಬರ್ 10 ರಂದು ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ರಾಜ್ಯಪಾಲರಾದ ಶ್ರೀಥಾವರ್ ಚಂದ್ ಗೆಹ್ಲೋಟ್ ಅವರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
10ವರ್ಷದ ಬಳಿಕ ಮತ್ತೆ ರಾಜಭವನದಲ್ಲೇ ಎನ್ಎಸ್ಎಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ರಾಜ್ಯ ಮಟ್ಟದ ಎನ್ಎಸ್ಎಸ್ ಪ್ರಶಸ್ತಿಯನ್ನು ಪ್ರತಿವರ್ಷ ರಾಜಭವನದ ಗಾಜಿನ ಮನೆಯಲ್ಲಿ ಪ್ರದಾನ ಮಾಡಲಾಗುತ್ತಿತ್ತು. ಆದರೆ, 2013 ರಿಂದ NSS ಪ್ರಶಸ್ತಿಯನ್ನು ರಾಜಭವನದಲ್ಲಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ 10 ವರ್ಷದ ಬಳಿಕ ಮತ್ತೆ ರಾಜಭವನದ ಗಾಜಿನ ಮನೆಯಲ್ಲಿ ಎನ್ಎಸ್ಎಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಳೇ ವೈಭವ ಮತ್ತೆ ಮರುಕಳಿಸಲಿದೆ.
NSS ಸ್ವಯಂಸೇವಕರು 5 ರಿಂದ 10 ಲಕ್ಷಕ್ಕೆ ವಿಸ್ತರಣೆ
ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸದ್ಯ ಐದು ಲಕ್ಷ ಸ್ವಯಂ ಸೇವಕರನ್ನು ಹೊಂದಿದ್ದು, ಈ ವರ್ಷ 10 ಲಕ್ಷಕ್ಕೆ ವಿಸ್ತರಿಸಲಾಗುತ್ತದೆ. ಹಾಗೂ ಹೊಸ ಶಿಕ್ಷಣ ನೀತಿಯಲ್ಲಿ ಎನ್ಎಸ್ಎಸ್ ಪಠ್ಯಕ್ರಮದ ಒಂದು ಭಾಗವಾಗಿರೋದು ವಿಶೇಷ ಹಾಗೂ ಎನ್ ಎಸ್ ಎಸ್ಗೆ ಗೆ ಒಂದು ಬಲ ಬಂದಂತಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
file:///C:/Users/ASUS/Downloads/Award%202020-21%20(1).pdf
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.