ಬೆಳಗಾವಿ: ಕಳೆದ ರಾತ್ರಿ ತೀವ್ರ ಹೃದಯಘಾತಕ್ಕೀಡಾಗಿ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಗೇವಾಡಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ಮಧ್ಯಾಹ್ನ 3.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಚಿವ ಕತ್ತಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಹದೇವಪುರದಲ್ಲಿ ಮಳೆ ಹಾನಿ ಪರಿಶೀಲನೆಯಲ್ಲಿದ್ದ ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ದೌಡಾಯಿಸಿದ್ದರು. ಆರೋಗ್ಯ ಸಚಿವ ಸುಧಾಕರ್, ಆರೋಗ್ಯ ಸಚಿವ ಆರ್.ಅಶೋಕ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮೂಲಕ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದು, “ಶ್ರೀ ಉಮೇಶ್ ಕತ್ತಿ ಜೀ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಚಿಂತನೆ ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ” ಎಂದಿದ್ದಾರೆ.
“ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಟ್ವಿಟ್ ಮಾಡಿದ್ದಾರೆ.
ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹುಕ್ಕೇರಿ ವಿಧಾನಸಭೆ ಕ್ಷೇತ್ರದಲ್ಲಿ 9 ಬಾರಿ ಸ್ಪರ್ಧಿಸಿದ್ದ ಕತ್ತಿ, ಪ್ರಸಕ್ತ ಅವಧಿಯೂ ಸೇರಿದಂತೆ ಎಂಟು ಬಾರಿ ಗೆಲುವಿನ ನಗೆ ಬೀರಿದ್ದರು. ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದ ಅವರು, ಪ್ರತ್ಯೇಕ ರಾಜ್ಯದ ಪ್ರಸ್ತಾಪವನ್ನೂ ಮುಂದಿಟ್ಟಿದ್ದರು.
Shri Umesh Katti Ji was an experienced leader who made rich contributions to Karnataka’s development. Pained by his demise. My thoughts are with his family and supporters in this tragic hour. Om Shanti.
— Narendra Modi (@narendramodi) September 7, 2022
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/tcfNlw9Cdr
— Basavaraj S Bommai (@BSBommai) September 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.