ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮಂಗಳವಾರ ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿಯಾಗಿದ್ದಾರೆ. ಶೇಖ್ ಹಸೀನಾ ಅವರು ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿದ್ದು, ಸೋಮವಾರ ನವದೆಹಲಿಗೆ ಆಗಮಿಸಿದ್ದಾರೆ.
ರಾಷ್ಟ್ರಪತಿ ಭವನಕ್ಕೆ ಶೇಖ್ ಹಸೀನಾ ಅವರನ್ನು ಸ್ವಾಗತಿಸಿದ ರಾಷ್ಟ್ರಪತಿಗಳು, “ನಮ್ಮ ಹಂಚಿಕೆಯ ಇತಿಹಾಸ, ಭಾಷೆ ಮತ್ತು ಸಂಸ್ಕೃತಿ ನಮ್ಮನ್ನು ಪರಸ್ಪರ ಸಂಪರ್ಕಿಸುತ್ತದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ನಾಯಕತ್ವದಲ್ಲಿ, ನೆರೆಹೊರೆಯವರ ನಡುವಿನ ದ್ವಿಪಕ್ಷೀಯ ಸಂಬಂಧಗಳು ಅಗಾಧವಾಗಿ ಬೆಳೆದಿವೆ” ಎಂದರು.
ಬಾಂಗ್ಲಾದೇಶದ ಸ್ವಾತಂತ್ರ್ಯದ 50 ನೇ ವರ್ಷ ಮತ್ತು ಭಾರತ-ಬಾಂಗ್ಲಾದೇಶ ದ್ವಿಪಕ್ಷೀಯ ಸಂಬಂಧಗಳ ಸುವರ್ಣ ಮಹೋತ್ಸವವನ್ನು ಉಭಯ ದೇಶಗಳು ಆಚರಿಸಿದ ರೀತಿ ನಿಜವಾಗಿಯೂ ವಿಶೇಷವಾಗಿದೆ ಎಂದು ಮುರ್ಮು ಹೇಳಿದರು.
“ಈ ಭೇಟಿಯೊಂದಿಗೆ ಉಭಯ ದೇಶಗಳ ನಡುವಿನ ಸಂಬಂಧಗಳು ಮತ್ತಷ್ಟು ಪಕ್ವಗೊಳ್ಳುತ್ತವೆ ಮತ್ತು ಅಭಿವೃದ್ಧಿ ಹೊಂದಲಿವೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಾಂಗ್ಲಾದೇಶವು ತನ್ನ ಜನರ ಸಾಮಾಜಿಕ-ಆರ್ಥಿಕ ಏಳಿಗೆಯಲ್ಲಿ ಮಹತ್ತರವಾದ ಯಶಸ್ಸನ್ನು ಸಾಧಿಸಿರುವುದನ್ನು ನೋಡಲು ಸಂತೋಷವಾಗುತ್ತದೆ ಎಂದರು.
ಬಾಂಗ್ಲಾದೇಶದ ಅಭಿವೃದ್ಧಿ ಪಯಣದಲ್ಲಿ ಭಾರತವು ವಿಶ್ವಾಸಾರ್ಹ ಪಾಲುದಾರನಾಗಿ ಮುಂದುವರಿಯುತ್ತದೆ ಎಂದು ಅವರು ಭರವಸೆ ನೀಡಿದರು.
Prime Minister Sheikh Hasina of Bangladesh called on President Droupadi Murmu at Rashtrapati Bhavan
Details: https://t.co/sAKaImn2jj pic.twitter.com/FIv1rel16f— President of India (@rashtrapatibhvn) September 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.