ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ದೇಶದ ಸಾರಿಗೆ ಕ್ಷೇತ್ರವನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಕೇಂದ್ರ ಮತ್ತು ರಾಜ್ಯಗಳೆರಡೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ನಡೆದ ಸಾರಿಗೆ ಅಭಿವೃದ್ಧಿ ಮಂಡಳಿಯ (ಟಿಡಿಸಿ) 41ನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ 5 ವರ್ಷಗಳಲ್ಲಿ ಆಟೋಮೊಬೈಲ್ ಉದ್ಯಮವನ್ನು 7.5 ಲಕ್ಷ ಕೋಟಿಯಿಂದ 15 ಲಕ್ಷ ಕೋಟಿಗೆ ಹೆಚ್ಚಿಸಲು ಪ್ರಯತ್ನಿಸಬೇಕು, ಭಾರತವನ್ನು ವಿಶ್ವದ ಅಗ್ರ ಆಟೋಮೊಬೈಲ್ ಉತ್ಪಾದನಾ ಕೇಂದ್ರವಾಗಿಸಲು ಪ್ರಯತ್ನಿಸಬೇಕು. ಭಾರತೀಯ ರಸ್ತೆ ವಲಯಕ್ಕೆ ಉತ್ತಮ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಮತ್ತು ಎಲ್ಲಾ ರಾಜ್ಯಗಳು ಡಿಜಿಟಲ್ ಸಂಪರ್ಕ ರಹಿತ ಸೇವೆಗಳಿಗೆ ಒತ್ತು ನೀಡುವುದರಿಂದ ಮಾತ್ರ ಇದು ಸಾಧ್ಯ ಎಂದು ಅವರು ಹೇಳಿದರು.
ಮಾಲಿನ್ಯ ಮತ್ತು ವೆಚ್ಚವನ್ನು ಕಡಿಮೆ ಮಾಡಲು ಎಲ್ಲಾ ಡೀಸೆಲ್ ಬಸ್ಗಳನ್ನು ಎಲೆಕ್ಟ್ರಿಕ್ ಬಸ್ಗಳೊಂದಿಗೆ ಬದಲಾಯಿಸಬೇಕು ಎಂದು ಸಚಿವರು ಹೇಳಿದರು.
ಪ್ರಧಾನಮಂತ್ರಿಯವರ ಆತ್ಮ ನಿರ್ಭರ ಭಾರತದ ದೃಷ್ಟಿಯನ್ನು ಈಡೇರಿಸಲು ಎಲ್ಲರು ಸಂಕಲ್ಪ ಮಾಡಬೇಕು ಎಂದು ಗಡ್ಕರಿ ಹೇಳಿದರು.
ರಸ್ತೆ ಅಪಘಾತಗಳ ಬಗ್ಗೆ ಗಂಭೀರ ಮತ್ತು ಸೂಕ್ಷ್ಮ ವಿಧಾನದ ಅಗತ್ಯವಿದೆ ಮತ್ತು ಜನರ ಅಮೂಲ್ಯ ಜೀವಗಳನ್ನು ಉಳಿಸಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಪುನರುಚ್ಚರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.