ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.
ಜಾರ್ಜಿವಾ ಅವರನ್ನು ರಾಷ್ಟ್ರಪತಿ ಭವನಕ್ಕೆ ಸ್ವಾಗತಿಸಿದ ಮುರ್ಮು, ಕೋವಿಡ್ ಸಾಂಕ್ರಾಮಿಕದ ಮೂರನೇ ವರ್ಷವನ್ನು ಜಗತ್ತು ಹಾದುಹೋಗುತ್ತಿದೆ ಎಂದು ಹೇಳಿದರು.
IMF ಮತ್ತು ವಿಶ್ವಬ್ಯಾಂಕ್ನಂತಹ ಬಹುಪಕ್ಷೀಯ ಸಂಸ್ಥೆಗಳಿಂದ ಅನೇಕ ಕಡಿಮೆ-ಆದಾಯದ ದೇಶಗಳಿಗೆ ಗಮನಾರ್ಹ ಸಹಾಯವನ್ನು ಒದಗಿಸಲಾಗಿದೆ. ಅಂತರಾಷ್ಟ್ರೀಯ ಹಣಕಾಸು ವ್ಯವಸ್ಥೆಯ ಸ್ಥಿರತೆಯನ್ನು ಕಾಪಾಡುವಲ್ಲಿ IMF ಪ್ರಮುಖ ಪಾತ್ರ ವಹಿಸಬೇಕಾಗಿದೆ ಎಂದು ಅವರು ಹೇಳಿದರು.
ಇಂದು ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದ ಮುರ್ಮು, ಭಾರತದ ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಯು ವಿಶ್ವದಲ್ಲಿ ಉನ್ನತ ಸ್ಥಾನದಲ್ಲಿದೆ. ಭಾರತದಲ್ಲಿ ಸ್ಟಾರ್ಟ್ಅಪ್ಗಳ ಯಶಸ್ಸು, ಅದರಲ್ಲೂ ವಿಶೇಷವಾಗಿ ಬೆಳೆಯುತ್ತಿರುವ ಯುನಿಕಾರ್ನ್ಗಳು ನಮ್ಮ ಕೈಗಾರಿಕಾ ಪ್ರಗತಿಗೆ ಉಜ್ವಲ ಉದಾಹರಣೆಯಾಗಿದೆ. ದೇಶದ ಅಭಿವೃದ್ಧಿಯು ಎಲ್ಲರನ್ನೂ ಒಳಗೊಳ್ಳುತ್ತಿದೆ ಮತ್ತು ಪ್ರಾದೇಶಿಕ ಅಸಮಾನತೆಗಳು ಕಡಿಮೆಯಾಗುತ್ತಿವೆ ಎಂಬುದು ಇನ್ನೂ ಹೆಚ್ಚು ಸಂತೋಷಕರ ಸಂಗತಿ ಎಂದು ಮುರ್ಮು ಹೇಳಿದರು.
ಇಂದಿನ ಭಾರತದ ಮೂಲ ಮಂತ್ರವು ಸಹಾನುಭೂತಿ – ದೀನದಲಿತರು, ನಿರ್ಗತಿಕರು ಮತ್ತು ದುರ್ಬಲರ ಬಗ್ಗೆ ಸಹಾನುಭೂತಿ ಎಂದು ಅವರು ಒತ್ತಿ ಹೇಳಿದರು.
2023 ರಲ್ಲಿ ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯ ಕುರಿತು ಮಾತನಾಡಿದ ಮುರ್ಮು, ಜಿ-20 ನಲ್ಲಿ ಬಹುಪಕ್ಷೀಯ ಸಹಕಾರವು ವೈವಿಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರನ್ನು ಒಳಗೊಂಡ ಮತ್ತು ನಮ್ಯತೆಯ ತತ್ವಗಳನ್ನು ಆಧರಿಸಿರಬೇಕು ಎಂದು ಹೇಳಿದರು. ಭಾರತದ ಅಧ್ಯಕ್ಷಗಿರಿಯ ಅವಧಿಯಲ್ಲಿ, ಎಲ್ಲರಿಗೂ ಶಾಂತಿಯುತ, ಸುಸ್ಥಿರ ಮತ್ತು ಸಮೃದ್ಧ ಜಗತ್ತನ್ನು ನಿರ್ಮಿಸುವ ದಿಕ್ಕಿನಲ್ಲಿ ಬಹುಪಕ್ಷೀಯತೆ ಮತ್ತು ಜಾಗತಿಕ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನಗಳನ್ನು ಮಾಡುವ ಮಹತ್ವಾಕಾಂಕ್ಷೆಯೊಂದಿಗೆ ಜಿ-20 ಫೋರಂ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.