ನವದೆಹಲಿ: ದೆಹಲಿಯ ಎಎಪಿ ಸರ್ಕಾರದ ವಿರುದ್ಧ ದೆಹಲಿ ವಿಶ್ವವಿದ್ಯಾಲಯ ಶಿಕ್ಷಕರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶಿಕ್ಷಕರಿಗೆ ಸರಿಯಾಗಿ ವೇತನ ಸಿಗುತ್ತಿಲ್ಲ ಮತ್ತು ಆಡಳಿತ ಮಂಡಳಿಯಲ್ಲಿ ರಾಜಕೀಯ ವ್ಯಕ್ತಿಗಳನ್ನು ಕೂರಿಸುತ್ತಿರುವ ಪರಿಣಾಮವಾಗಿ ದುರಾಡಳಿ ನಡೆಯುತ್ತಿದೆ ಎಂದು ಆರೋಪಿಸಿದೆ.
ಬಜೆಟ್ ಕಡಿತದಿಂದ ಶಿಕ್ಷಕರಿಗೆ ಸರಿಯಾದ ಸಂಬಳ ಸಿಗುತ್ತಿಲ್ಲ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ನಡೆಸುತ್ತಿರುವ ಕಾಲೇಜುಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ದೆಹಲಿ ವಿಶ್ವವಿದ್ಯಾಲಯ ಶಿಕ್ಷಕರ ಸಂಘ ಶುಕ್ರವಾರ ಕೇಂದ್ರವನ್ನು ಒತ್ತಾಯಿಸಿದೆ.
ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಮನೆಯ ಹೊರಗೆ ಶಿಕ್ಷಕರು ಪ್ರತಿಭಟನೆಗಳನ್ನು ಸಹ ನಡೆಸಿದ್ದರು ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಸಂಘದ ಮುಖ್ಯಸ್ಥ ಎ.ಕೆ ಭಾಗಿ ಆರೋಪಿಸಿದ್ದಾರೆ.
“ಹಣದ ಕೊರತೆಯಿಂದಾಗಿ, ದೆಹಲಿ ಸರ್ಕಾರದ 12 ಕಾಲೇಜುಗಳಲ್ಲಿ ಕಳೆದ ಎರಡು ವರ್ಷಗಳಿಂದ ಶಿಕ್ಷಕರ ವೇತನ ಕಡಿತವಾಗುತ್ತಿದೆ. ನಾವು ಸಿಎಂ ಮನೆ ಹೊರಗೆ ಪ್ರತಿಭಟನೆ ನಡೆಸಿದ್ದೇವೆ, ಉಪ ಮುಖ್ಯಮಂತ್ರಿ ಬಳಿ ಹೋಗಿದ್ದೇವೆ, ಯಾರೂ ನಮ್ಮ ಮಾತನ್ನು ಕೇಳಲಿಲ್ಲ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ನಾವು ಬಯಸುತ್ತೇವೆ” ಎಂದಿದ್ದಾರೆ.
ದೆಹಲಿ ಸರ್ಕಾರದಿಂದ ಅನುದಾನಿತ 12 ಕಾಲೇಜುಗಳು ಸುಮಾರು 85 ರಿಂದ 90 ಕೋಟಿಗಳಷ್ಟು ಕೊರತೆಯನ್ನು ಎದುರಿಸುತ್ತಿವೆ ಎಂದು ಭಾಗಿ ಹೇಳಿದ್ದಾರೆ.
“ಈ ಸಮಸ್ಯೆ 5 ವರ್ಷಗಳಿಂದ ನಡೆಯುತ್ತಿದೆ, ಹಿಂದೆ ಹಣ ವಿಳಂಬವಾಗಿತ್ತು, ಆದರೆ ಕಳೆದ ಎರಡು ವರ್ಷಗಳಿಂದ ಹಣವನ್ನು ಕಡಿತಗೊಳಿಸಲಾಗುತ್ತಿದೆ. ಪ್ರಸ್ತುತ, ದೆಹಲಿ ಸರ್ಕಾರದಿಂದ ಅನುದಾನಿತ 12 ಕಾಲೇಜುಗಳಲ್ಲಿ ಸುಮಾರು 85 ರಿಂದ 90 ಕೋಟಿಗಳಷ್ಟು ಕೊರತೆಯಿದೆ” ಎಂದು ಭಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.