ನವದೆಹಲಿ: ಇದನ್ನು ನಿಜವಾದ ಕರ್ತವ್ಯ ಪ್ರಜ್ಞೆ ಏನು ಎಂಬುದನ್ನು ಬೆಂಗಳೂರಿನ ವೈದ್ಯರೊಬ್ಬರು ತೋರಿಸಿಕೊಟ್ಟಿದ್ದಾರೆ. ಭಾರೀ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ್ದ ವೇಳೆ ರಸ್ತೆಯಲ್ಲೇ ಕಾರು ನಿಲ್ಲಿಸಿ ಆಸ್ಪತ್ರೆಗೆ ಓಡಿಕೊಂಡು ಹೋಗಿ ಸರ್ಜರಿ ನೆರವೇರಿಸಿದ್ದಾರೆ. ಅವರ ಕಾರ್ಯಕ್ಕೆ ಎಲ್ಲೆಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ವೈದ್ಯ ಶಸ್ತ್ರಚಿಕಿತ್ಸೆ ಮಾಡಲು ಆಸ್ಪತ್ರೆಗೆ ತಲುಪಲು ಬೆಂಗಳೂರಿನ ಬೀದಿಗಳಲ್ಲಿ ಓಡುತ್ತಿರುವುದನ್ನು ಕಾಣಬಹುದು.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯ ಡಾ.ಗೋವಿಂದ್ ನಂದಕುಮಾರ್ ಅವರು ಆಗಸ್ಟ್ 30 ರಂದು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ತೆರಳಿದ್ದರು. ಆದರೆ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ಸರ್ಜಾಪುರ-ಮಾರತಹಳ್ಳಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆದರೆ ಅವರಿಗೆ ರೋಗಿಯೊಬ್ಬರಿಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಹೀಗಾಗಿ ರೋಗಿಯ ಬಗ್ಗೆ ಯೋಚಿಸಿ ನಂದಕುಮಾರ್ ರಸ್ತೆಯಲ್ಲೇ ಕಾರಿನಿಂದ ಇಳಿದು ಓಡತೊಡಗಿದ್ದಾರೆ.
“ಮಣಿಪಾಲ್ ಆಸ್ಪತ್ರೆ ತಲುಪಬೇಕಿತ್ತು .ಅತಿವೃಷ್ಟಿ ಹಾಗೂ ನೀರು ನಿಂತಿದ್ದರಿಂದ ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಜಾಮ್ ಆಗಿತ್ತು. ಸಮಯ ವ್ಯಯ ಮಾಡಲು ಮನಸ್ಸಾಗಲಿಲ್ಲ. ರೋಗಿಗಳು ನನಗಾಗಿ ಕಾಯುತ್ತಿದ್ದರು. ಅದಕ್ಕಾಗಿ ಓಡಲು ನಿರ್ಧರಿಸಿದೆ” ಎಂದು ನಂದಕುಮಾರ್ ಹೇಳಿದ್ದಾರೆ.
ಕಳೆದ 18 ವರ್ಷಗಳಿಂದ ನಂದಕುಮಾರ್ ಅನೇಕ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಒಳ್ಳೆ ವೈದ್ಯರಾಗಿ ಖ್ಯಾತಿ ಪಡೆದಿದ್ದಾರೆ. ರೋಗಿಗಳ ಬಗ್ಗೆ ಯೋಚಿಸುತ್ತಾ ವೈದ್ಯರು ಆಸ್ಪತ್ರೆಯತ್ತ ಓಡಿದ ರೀತಿ ಎಲ್ಲರ ಮೆಚ್ಚುಗೆಗೂ ಪಾತ್ರವಾಗಿದೆ.
@BPACofficial @BSBommai @sarjapurblr @WFRising @blrcitytraffic sometimes better to run to work ! pic.twitter.com/6mdbLdUdi5
— Govind Nandakumar MD (@docgovind) September 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.