ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 17-19 ರವರೆಗೆ ಲಂಡನ್ಗೆ ಭೇಟಿ ನೀಡಲಿದ್ದು, ರಾಣಿ ಎಲಿಜಬೆತ್ II ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲಿದ್ದಾರೆ.
ರಾಣಿ ಎಲಿಜಬೆತ್ II, ಯುನೈಟೆಡ್ ಕಿಂಗ್ಡಮ್ನ ರಾಣಿಯಾಗಿದ್ದು, ಸೆಪ್ಟೆಂಬರ್ 8 ರಂದು ಸ್ಕಾಟ್ಲ್ಯಾಂಡ್ನ ಬಾಲ್ಮೋರಲ್ ಕ್ಯಾಸಲ್ ಬೇಸಿಗೆ ನಿವಾಸದಲ್ಲಿ 96 ನೇ ವಯಸ್ಸಿನಲ್ಲಿ ನಿಧನರಾದರು. ಸೆಪ್ಟೆಂಬರ್ 19 ರಂದು ವೆಸ್ಟ್ಮಿನ್ಸ್ಟರ್ ಅಬ್ಬೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ರಾಣಿ ಎಲಿಜಬೆತ್ ಅವರ ನಿಧನಕ್ಕೆ ರಾಷ್ಟ್ರಪತಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಸೆಪ್ಟೆಂಬರ್ 12 ರಂದು ಭಾರತದ ಸಂತಾಪವನ್ನು ತಿಳಿಸಲು ನವದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್ಗೆ ಭೇಟಿ ನೀಡಿದ್ದರು. ಭಾರತವೂ ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಶೋಕಾಚರಣೆಯ ದಿನವನ್ನು ಆಚರಿಸಿತು.
ರಾಣಿ ಎಲಿಜಬೆತ್ II ರ 70 ವರ್ಷಗಳ ಆಳ್ವಿಕೆಯಲ್ಲಿ, ಯುನೈಟೆಡ್ ಕಿಂಗ್ಡಮ್ ಮತ್ತು ಭಾರತದ ನಡುವಿನ ಸಂಬಂಧಗಳು ಅಗಾಧವಾಗಿ ಬಲಗೊಂಡಿವೆ. ಕಾಮನ್ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರಾಗಿ ವಿಶ್ವದಾದ್ಯಂತ ಲಕ್ಷಾಂತರ ಜನರ ಕಲ್ಯಾಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.