ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿದೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜಿ.ಸಿ.ಮಾಧುಸ್ವಾಮಿ ಈ ವಿಧೇಯಕ ಮಂಡಿಸಿದ್ದಾರೆ ಮತ್ತು ಸದನ ಇದರ ಚರ್ಚೆಗೆ ಅಂಗೀಕಾರ ನೀಡಿದೆ.
ಭೂ ಕಬಳಿಕೆ ಕಾಯಿದೆ–2011ರ ಹಾಗೂ 22ರ ಅಧಿಸೂಚನೆಗೆ ತಿದ್ದುಪಡಿ ತರಲಾಗಿದ್ದು, ನಗರ ಪಾಲಿಕೆ ಪರಿಮಿತಿ ಒಳಗಿನ ಸರ್ಕಾರ, ವಕ್ಫ್ ಅಥವಾ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳು, ಸ್ಥಳೀಯ ಪ್ರಾಧಿಕಾರಗಳು, ಸರ್ಕಾರದ ಒಡೆತನದ, ನಿಯಂತ್ರಣ, ವ್ಯವಸ್ಥಾಪನೆಗೆ ಒಳಪಟ್ಟ ಭೂಮಿಯ ವಿವಾದಗಳು ತಕ್ಷಣದಿಂದ ಕೊನೆಗೊಳಿಸುವುದಕ್ಕಾಗಿ ಈ ವಿಧೇಯಕ ಜಾರಿಗೆ ತರಲಾಗುತ್ತಿದೆ.
ಬಿಬಿಎಂಪಿ ಹಾಗೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಸ್ವತ್ತುಗಳನ್ನು ವಿಧೇಯಕದ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಈ ವಿಧೇಯಕದ ಚರ್ಚೆ ಮುಂದಿನ ವಾರ ಉಭಯ ಸದನಗಳಲ್ಲಿ ಪ್ರಾರಂಭವಾಗುವ ಸಾಧ್ಯತೆ ಇದೆ.
ಕನ್ನಡ ಭಾಷೆಯ ಅಭಿವೃದ್ಧಿ, ಕಡ್ಡಾಯ ಬಳಕೆ ಕುರಿತು ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರ ಮಾತು. https://t.co/1yhdRgnqOT
— CM of Karnataka (@CMofKarnataka) September 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.