ನವದೆಹಲಿ: ಪಶ್ಚಿಮಬಂಗಾಳದಲ್ಲಿ ಇತ್ತೀಚಿಗೆ ಬಿಜೆಪಿ ನಡೆಸಿದ ʼನಬನ್ನ ಚಲೋ ಮೆರವಣಿʼಯ ಸಂದರ್ಭದಲ್ಲಿ ಕಾರ್ಯಕರ್ತರ ಮೇಲೆ ನಡೆಸಲಾದ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಬಿಜೆಪಿ ಐವರು ಸದಸ್ಯರ ಸಮಿತಿಯನ್ನು ರಚನೆ ಮಾಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಉತ್ತರ ಪ್ರದೇಶದ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ಬ್ರಿಜ್ ಲಾಲ್, ಮಾಜಿ ಸಚಿವ ಮತ್ತು ಲೋಕಸಭಾ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್, ಲೋಕಸಭೆ ಸಂಸದ ಅಪರಾಜಿತಾ ಸಾರಂಗಿ, ರಾಜ್ಯಸಭಾ ಸಂಸದ ಸಮೀರ್ ಉಮ್ರಾವ್ ಮತ್ತು ಮಾಜಿ ಸಂಸದ ಸುನೀಲ್ ಜಾಖರ್ ನೇತೃತ್ವದಲ್ಲಿ ಐದು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ
ತಳಮಟ್ಟದಲ್ಲಿನ ಪರಿಸ್ಥಿತಿಯನ್ನು ತನಿಖೆ ಮಾಡಲು ಮತ್ತು ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ಕಾರಣವೇನು ಎಂಬುದನ್ನು ತನಿಖೆ ಮಾಡಲು ತನಿಖಾ ಸಮಿತಿಯ ಸದಸ್ಯರಿಗೆ ಸೂಚಿಸಲಾಗಿದೆ. ಸಮಿತಿಯು ತನ್ನ ವರದಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸಲ್ಲಿಸಲಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಿದೆ ಎಂದು ಮೂಲಗಳು ತಿಳಿಸಿವೆ.
ʼನಬನ್ನ ಚಲೋʼ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಲಾಗಿದ್ದು, ದೊಡ್ಡ ಮಟ್ಟದಲ್ಲಿ ಸಂಘರ್ಷ ಏರ್ಪಟ್ಟಿತ್ತು. ಮೆರವಣಿಗೆಗೆ ತೆರಳದಂತೆ ಕಾರ್ಯಕರ್ತರಿಗೆ ನಿರ್ಬಂಧ ವಿಧಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.