ಕೊಲ್ಲಂ: ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದೆ. ಪ್ರಸ್ತುತ ಯಾತ್ರೆಯು ಕೇರಳದಲ್ಲಿ ನಡೆಯುತ್ತಿದೆ. ಈ ನಡುವೆ ತರಕಾರಿ ವ್ಯಾಪಾರಿಯೊಬ್ಬರನ್ನು ಬೆದರಿಸಿ ಕಾಂಗ್ರೆಸ್ ಕಾರ್ಯಕರ್ತರು ಯಾತ್ರೆಗೆ ಹಣ ಕೇಳುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ಕಾರ್ಯಕರ್ತರ ಈ ಕೃತ್ಯಕ್ಕೆ ದೇಶವ್ಯಾಪಿಯಾಗಿ ಖಂಡನೆಗಳು ವ್ಯಕ್ತವಾಗುತ್ತಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಗಡಿ ಮಾಲೀಕ ಎಸ್ ಫವಾಝ್ ಕುನ್ನಿಕೋಡು ಅವರು, “ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಅಂಗಡಿಗೆ ಬಂದು ಭಾರತ್ ಜೋಡೋ ಯಾತ್ರೆಗೆ ದೇಣಿಗೆ ನೀಡುವಂತೆ ಕೇಳಿತು. ಅವರಿಗೆ ನಾನು 500 ರೂಪಾಯಿಗಳನ್ನು ಕೊಟ್ಟಿದ್ದೇನೆ. ಆದರೆ ಅವರು 2,000 ರೂಪಾಯಿಗಳನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ನಾನು ಅಷ್ಟೊಂದು ಹಣವನ್ನು ನೀಡಲು ನಿರಾಕರಿಸಿದೆ. ಇದರಿಂದ ಕೋಪಗೊಂಡ ಅವರು ತಕ್ಕಡಿಯನ್ನು ಹೊರಗೆ ಎಸೆದು, ತರಕಾರಿಗಳನ್ನು ಚೆಲ್ಲಿದರು” ಎಂದಿದ್ದಾರೆ.
ಕೇಳಿದಷ್ಟು ಹಣ ನೀಡದಿದ್ದರೆ ಜೀವಂತವಾಗಿ ಬಿಡುವುದಿಲ್ಲ ಎಂದು ಗುಂಪು ಬೆದರಿಕೆಯನ್ನು ಹಾಕಿರುವುದಾಗಿ ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿದ್ದಾರೆ.
ಈ ಘಟನೆಯಿಂದ ಮುಜುಗರಕ್ಕೆ ಒಳಗಾಗಿರುವ ಕಾಂಗ್ರೆಸ್ ಪಕ್ಷ, ಮೂವರು ಕಾರ್ಯಕರ್ತರನ್ನು ಅಮಾನತು ಮಾಡಿದ್ದೇವೆ ಎಂದು ಹೇಳಿಕೊಂಡಿದೆ.
Kerala | Vegetable shop owner threatened by Congress workers for not contributing Rs 2000 in fund collection for 'Bharat Jodo Yatra' in Kollam
(Photo source: Screenshot from viral video) pic.twitter.com/vzQaRWqwiB
— ANI (@ANI) September 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.