ನವದೆಹಲಿ: ಆಮ್ ಆದ್ಮಿ ಪಕ್ಷದ ಮಾನ್ಯತೆ ಹಿಂಪಡೆಯುವಂತೆ ಮತ್ತು ನೀತಿ ಸಂಹಿತೆ ಉಲ್ಲಂಘನೆಗಾಗಿ ಅದರ ಚಿಹ್ನೆಯನ್ನು ರದ್ದುಗೊಳಿಸುವಂತೆ ಕೋರಿ ನಿವೃತ್ತ ಅಧಿಕಾರಿಗಳ ಗುಂಪು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದೆ.
ಗುಜರಾತಿನಲ್ಲಿ ಪಕ್ಷಕ್ಕಾಗಿ ಕೆಲಸ ಮಾಡುವಂತೆ ಸಾರ್ವಜನಿಕ ಸೇವಕರಿಗೆ ಎಎಪಿ ಬಲವಂತಪಡಿಸುತ್ತಿದೆ ಎಂದು ಆರೋಪಿಸಿದೆ. ಅಲ್ಲದೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ನಿವೃತ್ತ ಅಧಿಕಾರಿಗಳು ಆಗ್ರಹಿಸಿದ್ದಾರೆ.
ಎಎಪಿಯಿಂದ ಚುನಾವಣಾ ಚಿಹ್ನೆಗಳ (ಮೀಸಲಾತಿ ಮತ್ತು ಹಂಚಿಕೆ) ಆದೇಶದ ಸೆಕ್ಷನ್ 1 ಎ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ನಿವೃತ್ತ ಅಧಿಕಾರಿಗಳ ಗುಂಪು ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದೆ.
“ಕೇಜ್ರಿವಾಲ್ ರಾಜ್ಕೋಟ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಏನು ಮಾತನಾಡಿದ್ದರೂ ಅದು ತುಂಬಾ ತಪ್ಪು. ಸಂವಿಧಾನದಲ್ಲಿ ನಂಬಿಕೆಯಿರುವ ನಮಗೆ ತೊಂದರೆಯಾಗಿದೆ. ಅಂತಹ ಅಸಮತೋಲನ ಮತ್ತು ವಿವಾದಾತ್ಮಕ ಹೇಳಿಕೆಯು ಒಂದು ರಾಜ್ಯದ ಮುಖ್ಯಮಂತ್ರಿಯಿಂದ ನಿರೀಕ್ಷಿತವಲ್ಲ” ಎಂದು ಪತ್ರದಲ್ಲಿ ಹೇಳಿದೆ.
“ಚುನಾವಣಾ ಪೂರ್ವದಲ್ಲಿ ಪ್ರಚಾರ ಮಾಡುವುದು ಅವರ ಹಕ್ಕು. ಆದರೆ ಸಾರ್ವಜನಿಕ ಸಾರಿಗೆ ನಿಗಮಗಳ ಚಾಲಕರು ಮತ್ತು ಕಂಡಕ್ಟರ್ಗಳು ಮತ್ತು ಪೊಲೀಸ್ ಸಿಬ್ಬಂದಿಗೆ ನಿರ್ದಿಷ್ಟ ಪಕ್ಷಕ್ಕಾಗಿ ಕೆಲಸ ಮಾಡುವಂತೆ ಅವರು ಮಾಡಿದ ಮನವಿ ತುಂಬಾ ತಪ್ಪು. ಸಾರ್ವಜನಿಕ ಸೇವಕರು ರಾಜಕೀಯ ಪಕ್ಷಕ್ಕಾಗಿ ಪ್ರಚಾರ ಮಾಡಬಾರದು. ನಮಗೆ ನೀತಿ ಸಂಹಿತೆ ಇದೆ. ನಮ್ಮ ನಿಷ್ಠೆಯು ಭಾರತದ ಸಂವಿಧಾನದೊಂದಿಗೆ ಇದೆ. ಈ ಆದ್ಯತೆಯು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಿಗೆ ಒಳ್ಳೆಯದಲ್ಲ” ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.
ಸ್ವತಃ ಸರ್ಕಾರಿ ಅಧಿಕಾರಿಯಾಗಿದ್ದ ಕೇಜ್ರಿವಾಲ್ ಅವರಿಗೆ ಏನು ಮಾಡಬಾರದು ಮತ್ತು ಏನು ಮಾಡಬೇಕು ಎಂಬುದು ತಿಳಿದಿಲ್ಲವೇ ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ.
ಐವತ್ತಾರು ನಿವೃತ್ತ ಅಧಿಕಾರಿಗಳು ಈ ಪತ್ರ ಬರೆದಿದ್ದಾರೆ. ಮಾಜಿ ಐಎಎಸ್, ಐಎಫ್ಎಸ್ ಮತ್ತು ಇತರ ಸೇವಾ ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ.
ಸೆಪ್ಟೆಂಬರ್ 3 ರಂದು ಗುಜರಾತ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಸೇವಕರನ್ನು ಪಕ್ಷಕ್ಕಾಗಿ ಕೆಲಸ ಮಾಡಲು ಪ್ರೇರೇಪಿಸಿದ್ದಾರೆ ಎಂಬ ಆರೋಪ ಕೇಜ್ರಿವಾಲ್ ಮೇಲೆ ಇದೆ.
56 retired bureaucrats submit letter to ECI on Arvind Kejriwal pc in Rajkot, Gujarat
Statement made by (Delhi CM) Kejriwal in press conference in Rajkot almost 20 days back, disturbed a lot of people who believed in constitution: M Madan Gopal, ex Addl Chief Secy of Karnataka pic.twitter.com/emJk5gI8P0
— ANI (@ANI) September 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.