ನವದೆಹಲಿ: ಮಹಾರಾಜ ಹರಿ ಸಿಂಗ್ ಅವರ ಜನ್ಮದಿನವನ್ನು ಸಾರ್ವಜನಿಕ ರಜೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಣೆ ಮಾಡಿದೆ. ಇದಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಕರಣ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.
ಕರಣ್ ಸಿಂಗ್ ಅವರು ಮಹಾರಾಜ ಹರಿ ಸಿಂಗ್ ಅವರು ಪುತ್ರನಾಗಿದ್ದಾರೆ.
“ನನಗೆ ಸಂತೋಷವಾಗಿದೆ. ಬಹಳ ಪ್ರಯತ್ನದ ನಂತರ ಇದು ಸಂಭವಿಸಿದೆ. ಈ ಪ್ರಯತ್ನಗಳನ್ನು ಮುಂದುವರಿಸಿದ ಜಮ್ಮುವಿನ ಯುವ ಪೀಳಿಗೆಯನ್ನು ನಾನು ಅಭಿನಂದಿಸುತ್ತೇನೆ. ಎಲ್ಲರೂ ಒಟ್ಟಿಗೆ ಈ ಕಾರ್ಯ ಸಾಧ್ಯವಾಗುವಂತೆ ಮಾಡಿದರು. ಇದಕ್ಕಾಗಿ ಧನ್ಯವಾದ” ಎಂದು ಕರಣ್ ಸಿಂಗ್ ಹೇಳಿದ್ದಾರೆ.
“ನನ್ನ ಮಕ್ಕಳಾದ ಅಜಾತಶತ್ರು ಮತ್ತು ವಿಕ್ರಮಾದಿತ್ಯ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾಗ ರಜೆಯ ಬಗ್ಗೆ ಸದನದಲ್ಲಿ ನಿರ್ಣಯವನ್ನು ಅಂಗೀಕರಿಸಿದ್ದರು. ಯಾರೂ ಅದನ್ನು ಮುಂದಕ್ಕೆ ಸಾಗಿಸಲಿಲ್ಲ. ನಾನು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ, ರಜೆ ಘೋಷಣೆಗೆ ನಾನು ಕೂಡ ಅವರಿಗೆ ಪತ್ರ ಬರೆದಿದ್ದೇನೆ” ಎಂದು ಅವರು ಹೇಳಿದರು.
ಈ ಹಿಂದೆ, ಮಹಾರಾಜ ಹರಿ ಸಿಂಗ್ ಅವರ ಪುತ್ರ ಕರಣ್ ಸಿಂಗ್ ಅವರು ಸೆಪ್ಟೆಂಬರ್ 23 ಅನ್ನು ಸಾರ್ವಜನಿಕ ರಜೆ ಎಂದು ಘೋಷಿಸಲು ಸ್ಥಳೀಯರ ಬೇಡಿಕೆಯನ್ನು ಅನುಮೋದಿಸಿದ್ದರು.
ಜಮ್ಮು ಮತ್ತು ಕಾಶ್ಮೀರ ಆಡಳಿತವು ಸೆಪ್ಟೆಂಬರ್ 23 ರಂದು ಮಹಾರಾಜ ಹರಿ ಸಿಂಗ್ ಅವರ ಜನ್ಮದಿನವನ್ನು ಸಾರ್ವಜನಿಕ ರಜೆ ಎಂದು ಘೋಷಿಸಲು ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ಗುರುವಾರ ರಾತ್ರಿ ತಿಳಿಸಿದ್ದಾರೆ.
ಈ ಕುರಿತು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.