ಮುಂಬೈ: ಕೇಂದ್ರ ರೈಲ್ವೇ ಪ್ರಧಾನ ಕಛೇರಿ ಮತ್ತು ಎಲ್ಲಾ ವಿಭಾಗಗಳ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಷಕ್ಕೆ 100 ಗಂಟೆಗಳ ಕಾಲ ಅಂದರೆ ವಾರಕ್ಕೆ ಎರಡು ಗಂಟೆಗಳ ಕಾಲ ಸ್ವಚ್ಛತೆಗಾಗಿ ಸ್ವಯಂಪ್ರೇರಿತವಾಗಿ ಕೆಲಸ ಮಾಡಲು, ಏಕ-ಬಳಕೆಯ ಪ್ಲಾಸ್ಟಿಕ್ಗಳ ವಿರುದ್ಧ ಜಾಗೃತಿ ಮೂಡಿಸಲು ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಮತ್ತು ಸ್ವಯಂ, ಕುಟುಂಬ, ಪ್ರದೇಶ, ಗ್ರಾಮ ಮತ್ತು ಕೆಲಸದ ಸ್ಥಳದಲ್ಲಿ ಸ್ವಚ್ಛತೆಯ ಮನೋಭಾವ ಉದ್ದೀಪಣಗೊಳಿಸಲು ಪ್ರತಿಜ್ಞೆ ಮಾಡಿದ್ದಾರೆ.
ಶುಕ್ರವಾರ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ನಲ್ಲಿ ಕೇಂದ್ರ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಅಲೋಕ್ ಸಿಂಗ್ ಅವರು ಕೇಂದ್ರ ರೈಲ್ವೆಯ ಪ್ರಧಾನ ವಿಭಾಗದ ಮುಖ್ಯಸ್ಥರು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು.
ವಿವಿಧ ಕಚೇರಿಗಳು, ಘಟಕಗಳು ಮತ್ತು ಡಿಪೋಗಳಲ್ಲಿ, ಶ್ರಮದಾನ ಮತ್ತು ಗಿಡ ನೆಡುವ ಚಟುವಟಿಕೆಗಳನ್ನು ಆಯೋಜಿಸಲಾಗಿದೆ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಎನ್ಜಿಒಗಳು ಮತ್ತು ದತ್ತಿ ಸಂಸ್ಥೆಗಳ ಸಹಯೋಗದಲ್ಲಿ ಬಟ್ಟೆ ಚೀಲಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪರಿಸರ ಮತ್ತು ಸ್ವಚ್ಛತೆಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳನ್ನು ಆರಂಭಿಸಲಾಯಿತು.
ನಿಲ್ದಾಣಗಳು, ರೈಲುಗಳು, ಕಛೇರಿಗಳು, ಕಾಲೋನಿಗಳು, ಕಾರ್ಯಾಗಾರಗಳು, ನಿರ್ವಹಣಾ ಡಿಪೋಗಳು ಮತ್ತು ಆಸ್ಪತ್ರೆಗಳಲ್ಲಿ ಸ್ವಚ್ಛತೆಯಲ್ಲಿ ಗೋಚರ ಸುಧಾರಣೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ರೈಲ್ವೆಯಾದ್ಯಂತ ಸೆಪ್ಟೆಂಬರ್ 16 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಪಖ್ವಾಡವನ್ನು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.