ಬೆಂಗಳೂರು: ಭಾರತೀಯರ ಅಚ್ಚುಮೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರಿಗೆ ಗಣ್ಯಾತಿ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವಿಟ್ ಮೂಲಕ ಪ್ರಧಾನಿಗೆ ಶುಭಾಶಯಗಳನ್ನು ಕೋರಿದ್ದಾರೆ.
“ನಮ್ಮ ರಾಷ್ಟ್ರವನ್ನು ಸುರಕ್ಷಿತ, ಸಮೃದ್ಧ ಮತ್ತು ಘನತೆಯ ರಾಷ್ಟ್ರವನ್ನಾಗಿ ಮಾರ್ಪಡಿಸುವಲ್ಲಿ, ಹಾಗೂ ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷವಾದ ಗೌರವ ಲಭಿಸಲು ಮಹತ್ತರ ಪಾತ್ರ ವಹಿಸಿರುವ ಭಾರತದ ಆದರ್ಶ ನಾಯಕರಾದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು” ಎಂದಿದ್ದಾರೆ.
ಇದೇ ವೇಳೆ ರಕ್ತದಾನ ಅಮೃತ ಮಹೋತ್ಸವಕ್ಕೂ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಸಂಸ್ಥೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಡಾ.ಕೆ.ಸುಧಾಕರ್ ವೈದ್ಯಕೀಯ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ.
ನಮ್ಮ ರಾಷ್ಟ್ರವನ್ನು ಸುರಕ್ಷಿತ, ಸಮೃದ್ಧ ಮತ್ತು ಘನತೆಯ ರಾಷ್ಟ್ರವನ್ನಾಗಿ ಮಾರ್ಪಡಿಸುವಲ್ಲಿ, ಹಾಗೂ ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷವಾದ ಗೌರವ ಲಭಿಸಲು ಮಹತ್ತರ ಪಾತ್ರ ವಹಿಸಿರುವ ಭಾರತದ ಆದರ್ಶನಾಯಕರಾದ ಪ್ರಧಾನ ಮಂತ್ರಿ ಶ್ರೀ @narendramodi ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.#HappyBdayModiJi pic.twitter.com/4ywZufWJwm
— Basavaraj S Bommai (@BSBommai) September 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.