ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿ.ಆರ್ ಅಂಬೇಡ್ಕರ್ ಅವರ ನಿಜವಾದ ಅನುಯಾಯಿಯಾಗಿದ್ದಾರೆ. ಸಮಾಜ ಸುಧಾರಕ ಅಂಬೇಡ್ಕರ್ ಅವರ ದೂರದೃಷ್ಟಿಯನ್ನು ವಾಸ್ತವಕ್ಕೆ ತರುವ ನಿಟ್ಟಿನಲ್ಲಿ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ಹೇಳಿದ್ದಾರೆ.
ಕೋವಿಂದ್ ಅವರು ಶಿಕ್ಷಣ, ಕಾರ್ಮಿಕ ಕಲ್ಯಾಣ, ಮಹಿಳಾ ಸಬಲೀಕರಣ, ಸ್ವಾವಲಂಬಿ ದೇಶ ನಿರ್ಮಾಣ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸಂವಿಧಾನದ 370 ನೇ ವಿಧಿಯ ನಿರ್ಮೂಲನಗೆ ಸಂಬಂಧಿಸಿದಂತೆ ಸರ್ಕಾರದ ಉಪಕ್ರಮಗಳನ್ನು ಪಟ್ಟಿ ಮಾಡಿದರು ಮತ್ತು ಈ ಕ್ರಮಗಳು ಅಂಬೇಡ್ಕರ್ ಅವರ ದೃಷ್ಟಿಕೋನಕ್ಕೆ ಸಮಾನವಾಗಿವೆ ಎಂದು ಹೇಳಿದರು.
“ಬಾಬಾಸಾಹೇಬ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಪ್ರಸ್ತಾಪವನ್ನು ತಿರಸ್ಕರಿಸಿದರು. ಆದರೆ ಸಂಕೀರ್ಣ ಘಟನೆಗಳ ನಂತರ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಾಯಿತು, ಅದು ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿತ್ತು. ” ಎಂದು ಕೋವಿಂದ್ ಹೇಳಿದ್ದಾರೆ.
ಮೋದಿ ಸರ್ಕಾರದ ಪ್ರಯತ್ನದ ನಂತರ 2019 ರ ಆಗಸ್ಟ್ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಈ ಅಸಮಾನತೆಯನ್ನು ತೆಗೆದುಹಾಕಲಾಯಿತು ಎಂದು ಅವರು ಹೇಳಿದರು.
“ಈ ಆದೇಶವು ಬಾಬಾಸಾಹೇಬರ ಆದರ್ಶಗಳನ್ನು ಸಹ ಪೂರೈಸುತ್ತದೆ. ಭಾರತದ ರಾಷ್ಟ್ರಪತಿಯಾಗಿ ಈ ಆದೇಶಕ್ಕೆ ಸಹಿ ಹಾಕುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ” ಎಂದು ಕೋವಿಂದ್ ಹೇಳಿದ್ದಾರೆ.
ಬ್ಲೂಕಾರ್ಟ್ ಡಿಜಿಟಲ್ ಫೌಂಡೇಶನ್ ರೂಪಿಸಿದ “ಅಂಬೇಡ್ಕರ್ ಆಂಡ್ ಮೋದಿ: ರಿಫಾರ್ಮರ್ಸ್ ಐಡಿಯಾಸ್, ಪರ್ಫಾಮರ್ಸ್ ಇಂಪ್ಲಿಮೆಂಟೇಶನ್” ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾಜಿ ರಾಷ್ಟ್ರಪತಿಗಳು ಮಾತನಾಡುತ್ತಿದ್ದರು.
ಇದಕ್ಕೂ ಮುನ್ನ ಇಲ್ಲಿನ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದಲ್ಲಿ ಆಯೋಜಿಸಿದ್ದ ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಮಯ’ ಕುರಿತ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.