ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ನಿನ್ನೆ ರಾತ್ರಿ ನ್ಯೂಯಾರ್ಕ್ಗೆ ಆಗಮಿಸಿದ್ದಾರೆ.
ತಮ್ಮ ಯುಎಸ್ ಪ್ರವಾಸದ ಮೊದಲ ಹಂತದಲ್ಲಿ ನ್ಯೂಯಾರ್ಕ್ಗೆ ಭೇಟಿ ನೀಡಿರುವ ಅವರು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಉನ್ನತ ಮಟ್ಟದ ಭಾರತದ ನಿಯೋಗವನ್ನು ಮುನ್ನಡೆಸಲಿದ್ದಾರೆ.
77 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವಿಷಯವು ʼA Watershed Moment: Transformative Solutions to Interlocking Challenges’ ಎಂಬುದಾಗಿದೆ.
ಸುಧಾರಿತ ಬಹುಪಕ್ಷೀಯತೆಗೆ ಭಾರತದ ಬಲವಾದ ಬದ್ಧತೆಗೆ ಅನುಗುಣವಾಗಿ, ಸಚಿವರು G4 ಅಂದರೆ ಭಾರತ, ಬ್ರೆಜಿಲ್, ಜಪಾನ್ ಮತ್ತು ಜರ್ಮನಿಯ ಮಂತ್ರಿಗಳ ಸಭೆಯನ್ನು ಆಯೋಜಿಸುತ್ತಾರೆ ಮತ್ತು ಬಹುಪಕ್ಷೀಯತೆಯನ್ನು ಪುನರುಜ್ಜೀವನಗೊಳಿಸುವುದು ಮತ್ತು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸಮಗ್ರ ಸುಧಾರಣೆಯನ್ನು ಸಾಧಿಸುವ ನಿಟ್ಟಿನಲ್ಲಿನ L-69 ಗುಂಪಿನ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸುತ್ತಾರೆ. L-69 ಗ್ರೂಪ್ ಏಷ್ಯಾ, ಆಫ್ರಿಕಾ, ಲ್ಯಾಟಿನ್ ಅಮೇರಿಕಾ, ಕೆರಿಬಿಯನ್ ಮತ್ತು ಸಣ್ಣ ದ್ವೀಪ ಅಭಿವೃದ್ಧಿಶೀಲ ರಾಜ್ಯಗಳಿಂದ ಅಭಿವೃದ್ಧಿ ಹೊಂದುತ್ತಿರುವ ದೇಶಗಳನ್ನು ಒಳಗೊಂಡಿದೆ. ಇದು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸುಧಾರಣೆಗಳ ಮೇಲೆ ಕೇಂದ್ರೀಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.