ನವದೆಹಲಿ: ವಿಶ್ವ ನಾಯಕರು ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಉನ್ನತ ಮಟ್ಟದ ಸಭೆಯನ್ನು ಪ್ರಾರಂಭಿಸಲಿದ್ದಾರೆ. ಜಾಗತಿಕ ಧ್ರುವೀಕರಣ, ರಷ್ಯಾ-ಉಕ್ರೇನ್ ಸಂಘರ್ಷ, ಆಹಾರ ಮತ್ತು ಇಂಧನ ಬಿಕ್ಕಟ್ಟುಗಳು, ಆರ್ಥಿಕ ಸಮಸ್ಯೆಗಳು ಮತ್ತು ನೈಸರ್ಗಿಕ ವಿಕೋಪಗಳು ಇಲ್ಲಿ ಹೆಚ್ಚಿನ ಆದ್ಯತೆ ಪಡೆಯುವ ನಿರೀಕ್ಷೆ ಇದೆ.
“”A Watershed Moment: Transformative Solutions to Interlocking Challenges” ಈ ವರ್ಷದ ಸಭೆಯ ವಿಷಯವಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆಯು ಸಭೆಯಲ್ಲಿ ಹೊಸ ಗಮನ ಸೆಳೆಯುವ ನಿರೀಕ್ಷೆಯಿದೆ.
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪ್ರಪಂಚದಾದ್ಯಂತದ ನಾಯಕರನ್ನು ಭೇಟಿಯಾಗಲಿದ್ದಾರೆ ಮತ್ತು ಸುಧಾರಣೆಗಳ ಮೇಲೆ ಕೇಂದ್ರೀಕರಿಸಿದ ಎರಡು ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಸ್ಥಗಿತಗೊಂಡಿರುವ ಸುಧಾರಣಾ ಪ್ರಕ್ರಿಯೆಯನ್ನು ಮುಂದಕ್ಕೆ ಸಾಗಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡನ್ ಹೊಸ ಆಲೋಚನೆಗಳನ್ನು ಪ್ರಸ್ತುತಪಡಿಸುತ್ತಾರೆ ಮತ್ತು ಅದರ ಬಗ್ಗೆ ವ್ಯಾಪಕ ಸಮಾಲೋಚನೆಗಳನ್ನು ನಡೆಸುತ್ತಾರೆ ಎಂದು ಯುಎಸ್ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಸಭೆಗೆ ಹಾಜರಾಗುತ್ತಿಲ್ಲ ಮತ್ತು ಡಾ. ಜೈಶಂಕರ್ ಅವರು ಶನಿವಾರ ಭಾರತವನ್ನು ಪ್ರತಿನಿಧಿಸಿ ಮಾತನಾಡಲಿದ್ದಾರೆ.
ಹೆಚ್ಚಿನ ಭದ್ರತೆಯ ನಡುವೆ ನಡೆಯುವ ಅಸೆಂಬ್ಲಿಯ ಸಾಮಾನ್ಯ ಚರ್ಚೆಯಲ್ಲಿ ಸುಮಾರು 150 ಸರ್ಕಾರ ಅಥವಾ ರಾಷ್ಟ್ರಗಳ ಮುಖ್ಯಸ್ಥರ ಉಪಸ್ಥಿತಿಯನ್ನು ನಿರೀಕ್ಷಿಸಲಾಗಿದೆ. ಪ್ರಪಂಚವು ಕೋವಿಡ್ ಸಾಂಕ್ರಾಮಿಕದ ಕೆಟ್ಟ ಪರಿಸ್ಥಿತಿಯಿಂದ ಹೊರಬಂದ ಬಳಿಕ ಉನ್ನತ ಮಟ್ಟದ ಸಭೆಯು ಎರಡು ವರ್ಷಗಳ ನಂತರ ಭತಿಕವಾಗಿ ನಡೆಯುತ್ತಿದೆ. ಇದನ್ನು 2020 ರಲ್ಲಿ ವರ್ಚುವಲ್ ಮತ್ತು 2021 ರಲ್ಲಿ ಹೈಬ್ರಿಡ್ ಆಗಿ ನಡೆಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.