ಜೈಪುರ: ರಾಜಸ್ಥಾನದಲ್ಲಿ 57,000 ಕ್ಕೂ ಹೆಚ್ಚು ಜಾನುವಾರುಗಳ ಸಾವಿಗೆ ಕಾರಣವಾದ ಮತ್ತು 11 ಲಕ್ಷಕ್ಕೂ ಹೆಚ್ಚು ಹಸುಗಳನ್ನು ಬಾಧಿಸಿದ ಲಂಪಿ ಸ್ಕಿನ್ ಡಿಸೀಸ್ (ಚರ್ಮಗಂಟು ರೋಗ) ವಿರುದ್ಧ ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ನಡೆಸಿತು.
ಈ ವೇಳೆ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಬ್ಯಾರಿಕೇಡ್ಗಳನ್ನು ಮುರಿಯಲಾಗಿದೆ. ರಾಜ್ಯ ವಿಧಾನಸಭೆಗೆ ಬಿಜೆಪಿ ಮೆರವಣಿಗೆಯನ್ನು ಪೊಲೀಸರು ತಡೆದಿದ್ದು ಘರ್ಷಣೆಗೆ ಕಾರಣವಾಗಿದೆ. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಗಿದೆ.
ರಾಜ್ಯ ವಿಧಾನಸಭೆಯಲ್ಲೂ ಬಿಜೆಪಿ ಈ ವಿಷಯವನ್ನು ಪ್ರಸ್ತಾಪಿಸಿದೆ. ಸೋಮವಾರ ಬಿಜೆಪಿ ಶಾಸಕರೊಬ್ಬರು ರಾಜ್ಯ ವಿಧಾನಸಭೆ ಆವರಣದ ಹೊರಗೆ ಹಸುವನ್ನು ಕರೆತಂದು ಚರ್ಮ ಗಂಟು ರೋಗದ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದರು.
ಇನ್ನೊಂದೆಡೆ ಈ ರೋಗವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.
ಈ ಚರ್ಮ ರೋಗದಿಂದ ಹಸುಗಳ ಜೀವ ಉಳಿಸುವುದು ಹೇಗೆ ಎಂಬುದು ನಮ್ಮ ಆದ್ಯತೆಯಾಗಿದ್ದು, ಕೇಂದ್ರವೇ ಲಸಿಕೆ, ಔಷಧ ನೀಡಬೇಕಿದ್ದು, ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸುತ್ತಿದ್ದೇವೆ ಎಂದರು.
ಜೈಪುರದಲ್ಲಿ ಹಾಲಿನ ಸಂಗ್ರಹಕ್ಕೂ ಈ ರೋಗ ಹಾನಿಯುಂಟು ಮಾಡಿದ್ದು, ರಾಜ್ಯದಲ್ಲಿ ತಯಾರಿಸುವ ಸಿಹಿತಿಂಡಿಗಳ ಬೆಲೆಯಲ್ಲಿ ಏರಿಕೆಯಾಗಿದೆ. ಜೈಪುರ ಡೈರಿ ಫೆಡರೇಶನ್ ಪ್ರಕಾರ, ರಾಜ್ಯದ ಅತಿದೊಡ್ಡ ಹಾಲು ಸಹಕಾರಿಯ ಹಾಲು ಸಂಗ್ರಹಣೆಯು ಶೇಕಡಾ 15-18 ರಷ್ಟು ಕಡಿಮೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.