ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಇವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, “ಇಸಿಸ್ ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ ಮೂವರನ್ನು ಪತ್ತೆ ಮಾಡಲಾಗಿದೆ. ಅವರಲ್ಲಿ ಮಾಝ್ ಮತ್ತು ಸೈಯದ್ ಯಾಸಿನ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಒಬ್ಬ ಸಂಕೇತ ತಪ್ಪಿಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನ ಬಂಧನ ಕೂಡ ನಡೆಯಲಿದೆ” ಎಂದಿದ್ದಾರೆ.
ಬಂದಿದ್ದರೂ ಶಿವಮೊಗ್ಗ ತೀರ್ಥಹಳ್ಳಿ ನಿವಾಸಿಗರು. ಇವರ ಚಟುವಟಿಕೆಯ ಬಗ್ಗೆ ತೀವ್ರವಾದ ರೀತಿಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಂದಿತರಾದ ಮಾಸ್ ಮತ್ತು ಶಾರ್ಕ್ ಮೇಲೆ ಮಂಗಳೂರಿನಲ್ಲಿ ಗೋಡೆ ಬರಹ ಕೇಸ್ ಇತ್ತು. ಜಾಮೀನು ಪಡೆದು ಹೊರಗಡೆ ಬಂದಿದ್ದರು. ಈಗ ಅವರಿಗೆ ನಿಷೇಧಿತ ಅಗ್ರ ಸಂಘಟನೆಯ ಜೊತೆ ಸಂಪರ್ಕ ಇತ್ತು ಎಂಬ ಮಾಹಿತಿ ದೊರೆಯುತ್ತಿದೆ ಎಂದಿದ್ದಾರೆ.
ವರದಿಗಳ ಪ್ರಕಾರ ಮಂಗಳೂರಿನಲ್ಲಿ, ಶಾರೀಕ್ ಮತ್ತು ಮಾಝ್ ಜೊತೆ ಸಂಪರ್ಕ ಹೊಂದಿದ್ದ ಮತ್ತೊಬ್ಬ ಶಂಕಿತನನ್ನು ಬಂಧನಕ್ಕೆ ಒಳಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.