ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಗುರುವಾರ ಬೆಳಗ್ಗೆ ಪಿಎಫ್ಐ ಸೇರಿದಂತೆ ವಿವಿಧ ಗುಂಪುಗಳು ಮತ್ತು ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಬೃಹತ್ ರಾಷ್ಟ್ರವ್ಯಾಪಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ.
“ಇಲ್ಲಿಯವರೆಗಿನ ಅತಿದೊಡ್ಡ ತನಿಖೆಯ ಭಾಗವಾಗಿ, ಭಯೋತ್ಪಾದಕ ನಿಧಿ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಉತ್ತೇಜಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವವರ ಮನೆ ಮತ್ತು ಕಚೇರಿಗಳ ಮೇಲೆ ಶೋಧಗಳು ನಡೆಯುತ್ತಿವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಿಎಫ್ಐನ ರಾಷ್ಟ್ರೀಯ, ರಾಜ್ಯ, ಸ್ಥಳೀಯ ಮುಖಂಡರ ಮನೆಗಳ ಮೇಲೆ ದಾಳಿ ನಡೆಯುತ್ತಿದ್ದು, ರಾಜ್ಯ ಸಮಿತಿ ಕಚೇರಿ ಮೇಲೂ ದಾಳಿ ನಡೆಸಲಾಗುತ್ತಿದೆ.
ದೇಶಾದ್ಯಂತ 80ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ 300 ಎನ್ಐಎ ಅಧಿಕಾರಿಗಳು ಭಾಗಿಯಾಗಿದ್ದಾರೆ. NIA ಮೂಲಗಳ ಪ್ರಕಾರ, 10 ರಾಜ್ಯಗಳಲ್ಲಿ ಹುಡುಕಾಟಗಳು ನಡೆಯುತ್ತಿವೆ ಮತ್ತು PFI ನ ಕನಿಷ್ಠ 100 ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಎನ್ಐಎಯು ರಾಜ್ಯ ಪೊಲೀಸರೊಂದಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ವಯದೊಂದಿಗೆ ದಾಳಿಗಳನ್ನು ನಡೆಸುತ್ತಿದೆ.
ಕರ್ನಾಟಕದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಪಿಎಫ್ ಐ ರಾಜ್ಯಾಧ್ಯಕ್ಷ ಸೇರಿದಂತೆ ಇತರ ನಾಯಕರ ಮನೆ ಮೇಲೆ ದಾಳಿ ನಡೆಸಲಾಗಿದೆ. ದಾಳಿ ಖಂಡಿಸಿ ಪ್ರತಿಭಟನೆಗಿಳಿದಿದ್ದ ಪಿಎಫ್ಐ ಕಾರ್ಯಕರ್ತರನ್ನು ಚದುರಿಸಲಾಗಿದೆ.
ಕೇರಳದ ತಿರುವನಂತಪುರಂನಲ್ಲಿ ಪಿಎಫ್ಐ ನಾಯಕರ ಮನೆಗಳ ಮೇಲೆ ದಾಳಿಯಾಗಿದೆ ಮತ್ತು ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್ಐ ಅಧ್ಯಕ್ಷ ಓಎಂಎ ಸಲಾಂ ಅವರ ಮನೆ ಸೇರಿದಂತೆ ಜಿಲ್ಲಾ ಮಟ್ಟದ ನಾಯಕರ ಮನೆಗಳು ಮತ್ತು ಪಿಎಫ್ಐ ಕಚೇರಿಗಳ ಮೇಲೆ ಮಧ್ಯರಾತ್ರಿಯಿಂದ ದಾಳಿ ನಡೆಸಲಾಗುತ್ತಿದೆ.
ತಮಿಳುನಾಡಿನಲ್ಲಿ, ಕೊಯಂಬತ್ತೂರು, ಕಡಲೂರು, ರಾಮನಾಡ್, ದಿಂಡುಗಲ್, ತೇಣಿ ಮತ್ತು ತೆಂಕಾಶಿಯಲ್ಲಿನ PFI ಪದಾಧಿಕಾರಿಗಳ ಮನೆಗಳಲ್ಲಿ ಎನ್ಐಎ ಶೋಧ ನಡೆಯುತ್ತಿದೆ. ಪುರಸವಕ್ಕಂನಲ್ಲಿರುವ ಚೆನ್ನೈ PFI ರಾಜ್ಯ ಪ್ರಧಾನ ಕಚೇರಿಯಲ್ಲೂ ಶೋಧ ನಡೆಸಲಾಗುತ್ತಿದೆ.
ತೆಲಂಗಾಣ, ಕೇರಳ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.