ನವದೆಹಲಿ: ಟೋಕಿಯೋದಲ್ಲಿ ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 27 ರಂದು ಜಪಾನ್ಗೆ ಭೇಟಿ ನೀಡಲಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಭೇಟಿಯ ಸಮಯದಲ್ಲಿ ಮೋದಿ ಅವರು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಿದರು.
ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಬಾಗ್ಚಿ, ಥೈಲ್ಯಾಂಡ್ನಲ್ಲಿ ಉದ್ಯೋಗಾವಕಾಶಗಳನ್ನು ತೆಗೆದುಕೊಳ್ಳುವ ಮೊದಲು ಭಾರತೀಯ ಪ್ರಜೆಗಳು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಐಟಿ ಕಂಪನಿಗಳು ಥಾಯ್ಲೆಂಡ್ನಲ್ಲಿ ಉದ್ಯೋಗಾವಕಾಶಗಳನ್ನು ನೀಡುತ್ತೇವೆ ಎಂದು ಹೇಳಿ ಭಾರತೀಯ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ ಆದರೆ ನಂತರ ಅವರನ್ನು ಅಕ್ರಮವಾಗಿ ಮ್ಯಾನ್ಮಾರ್ಗೆ ಕರೆದೊಯ್ಯಲಾಗುತ್ತಿರುವ ಬಗ್ಗೆ ಮಾಹಿತಿ ಇದೆ ಎಂದಿದ್ದಾರೆ.
ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ನಲ್ಲಿರುವ ಭಾರತೀಯ ಮಿಷನ್ಗಳ ಪ್ರಯತ್ನದಿಂದಾಗಿ ಕೆಲವು ಸಂತ್ರಸ್ಥರ ರಕ್ಷಣೆಗೆ ಸಾಧ್ಯವಾಗಿದೆ ಎಂದು ಅವರು ಹೇಳಿದರು. ಥೈಲ್ಯಾಂಡ್ನಲ್ಲಿ ವೀಸಾ ಆನ್ ಅರೈವಲ್ ಯೋಜನೆಯು ಉದ್ಯೋಗವನ್ನು ಅನುಮತಿಸುವುದಿಲ್ಲ ಎಂದು ಅವರು ಒತ್ತಿ ಹೇಳಿದರು. ಥೈಲ್ಯಾಂಡ್ ಮತ್ತು ಮ್ಯಾನ್ಮಾರ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳು ಈ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿವೆ ಮತ್ತು ಈ ವಿಷಯವನ್ನು ಥೈಲ್ಯಾಂಡ್ ಮತ್ತು ಮ್ಯಾನ್ಮಾರ್ ಸರ್ಕಾರಗಳೊಂದಿಗೆ ಸಹ ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದರು.
ಕೆನಡಾದಲ್ಲಿ ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಕುರಿತು ಮಾತನಾಡಿದ ಬಾಗ್ಚಿ, ಇದನ್ನು ಕೆನಡಾದ ಉಗ್ರಗಾಮಿ ಮತ್ತು ಮೂಲಭೂತವಾದಿಗಳು ನಡೆಸಿದ ಪ್ರಹಸನದ ವ್ಯಾಯಾಮ ಎಂದು ಹೇಳಿದ್ದಾರೆ. ರಾಜತಾಂತ್ರಿಕ ಮಾರ್ಗಗಳ ಮೂಲಕ ಕೆನಡಾದ ಅಧಿಕಾರಿಗಳೊಂದಿಗೆ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದರು.
ಸ್ನೇಹಪರ ದೇಶದಲ್ಲಿ ರಾಜಕೀಯ ಪ್ರೇರಿತ ಕಸರತ್ತುಗಳಿಗೆ ಅವಕಾಶ ನೀಡಿರುವುದುಆಕ್ಷೇಪಾರ್ಹವಾಗಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರವು ಕೆನಡಾ ಸರ್ಕಾರದ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.