ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಬದರಿನಾಥ್ ಮತ್ತು ಕೇದಾರನಾಥದಲ್ಲಿ ನಡೆಯುತ್ತಿರುವ ಮರು ನಿರ್ಮಾಣ ಕಾಮಗಾರಿಗಳನ್ನು ವರ್ಚುವಲ್ ಮಾಧ್ಯಮದ ಮೂಲಕ ಪರಿಶೀಲಿಸಿದರು ಮತ್ತು ನಿರ್ಮಾಣ ಕಾಮಗಾರಿಗಳ ಪ್ರಗತಿಯ ಬಗ್ಗೆಯೂ ವಿಚಾರಿಸಿದರು.
ಅಭಿವೃದ್ಧಿ ಕಾಮಗಾರಿಗಳ ಕಾರಣದಿಂದ ಮುಂದಿನ ದಿನಗಳಲ್ಲಿ ಕೇದಾರನಾಥ ಮತ್ತು ಬದರಿನಾಥದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಲಿದೆ ಎಂದು ಪ್ರಧಾನಿ ಅಭಿಪ್ರಾಯಿಸಿದ್ದಾರೆ.
“ರಾಂಬಾರ ಮತ್ತು ಕೇದಾರನಾಥದ ನಡುವೆ ಭಕ್ತರಿಗೆ ಇರುವ ವಸತಿ ಮತ್ತು ಮೂಲ ಸೌಕರ್ಯಗಳ ಬಗ್ಗೆಯೂ ಗಮನ ಹರಿಸಬೇಕು. ವಾಸುಕಿಟಾಲ್, ಗರುಡ ಚಟ್ಟಿ, ಲಿಂಚೋಲಿ ಮತ್ತು ಸುತ್ತಮುತ್ತಲಿನ ಭಕ್ತರಿಗೆ ಆಧ್ಯಾತ್ಮಿಕವಾಗಿ ಏನು ಮಾಡಬಹುದು ಎಂಬ ನಿಟ್ಟಿನಲ್ಲಿ ಸಂಪೂರ್ಣ ಯೋಜನೆಯನ್ನು ಸಿದ್ಧಪಡಿಸಬೇಕು” ಎಂದು ಪ್ರಧಾನಿ ಹೇಳಿದರು.
“ಗ್ರಾಮೀಣ ಪ್ರವಾಸೋದ್ಯಮಕ್ಕಾಗಿ ಮನ ಗ್ರಾಮ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಬೇಕು. ಇಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವ ಮೂಲಕ ಆರ್ಥಿಕತೆಯ ಉತ್ತಮ ಮಾದರಿಯನ್ನು ಉತ್ತೇಜಿಸಬಹುದು” ಎಂದಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾತನಾಡಿ, “ಬದರಿನಾಥ ಜತೆಗೆ ಸುತ್ತಲಿನ ಪ್ರದೇಶಗಳನ್ನೂ ಮಾದರಿಯಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ, ಮಾನ ಗ್ರಾಮ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಗ್ರಾಮೀಣ ಪ್ರವಾಸೋದ್ಯಮದ ದೃಷ್ಟಿಯಿಂದ ಅಭಿವೃದ್ಧಿಪಡಿಸಲು ಸಹ ಗಮನಹರಿಸಬೇಕು. ಬದರಿನಾಥ್ ಮತ್ತು ಕೇದಾರನಾಥದಲ್ಲಿ ಪುನರ್ನಿರ್ಮಾಣ ಕಾರ್ಯಗಳು ತ್ವರಿತ ಗತಿಯಲ್ಲಿ ನಡೆಯುತ್ತಿವೆ. 2023ರ ಡಿಸೆಂಬರ್ ಒಳಗೆ ಎಲ್ಲ ಕಾಮಗಾರಿ ಪೂರ್ಣಗೊಳಿಸಲು ಗುರಿ ನಿಗದಿಪಡಿಸಲಾಗಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.