ನವದೆಹಲಿ: ಪಿಎಫ್ಐ ಸ್ಥಳಗಳ ಮೇಲೆ ಎನ್ಐಎ ದಾಳಿ ಮತ್ತು 100 ಕ್ಕೂ ಹೆಚ್ಚು ಜನರನ್ನು ಬಂಧಿಸಿರುವುದನ್ನು ವಿರೋಧಿಸಿ ಕೇರಳದಲ್ಲಿ ಹರತಾಳಕ್ಕೆ ಕರೆ ನೀಡರುವದ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಾಯಕರ ವಿರುದ್ಧ ಕೇರಳ ಹೈಕೋರ್ಟ್ ಇಂದು ಸ್ವಯಂಪ್ರೇರಿತ ವಿಚಾರಣೆ ಪ್ರಾರಂಭಿಸಿದೆ.
ಪಿಎಫ್ಐ ಗೂಂಡಾಗಳು ಕೇರಳದಲ್ಲಿ ದಾಂಧಲೆಯನ್ನು ನಡೆಸುತ್ತಿದ್ದು ಬಸ್, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸೂಚನೆ ನೀಡಿರುವ ಹೈಕೋರ್ಟ್, ಹರತಾಳಗಳನ್ನು ನಿಷೇಧಿಸಲಾಗಿದೆ ಮತ್ತು ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಸಾರ್ವಜನಿಕ ಆಸ್ತಿಪಾಸ್ತಿ ನಾಶವನ್ನು ಒಪ್ಪಲಾಗದು ಎಂದು ಅದು ಹೇಳಿದೆ.
ಕೇರಳ ಹೈಕೋರ್ಟ್ ಜನವರಿ 7, 2019 ರ ಆದೇಶದಲ್ಲಿ ಏಳು ದಿನಗಳ ಪೂರ್ವ ಸೂಚನೆ ಇಲ್ಲದೆ ರಾಜ್ಯದಲ್ಲಿ ಯಾರೂ ಬಂದ್ಗೆ ಕರೆ ನೀಡುವಂತಿಲ್ಲ ಎಂದು ಹೇಳಿತ್ತು.
ಶುಕ್ರವಾರ ಬೆಳಗ್ಗೆಯಿಂದ ಕೇರಳದ ವಿವಿಧ ಭಾಗಗಳಲ್ಲಿ ಪಿಎಫ್ಐ ಕರೆ ನೀಡಿರುವ ಮುಂಜಾನೆಯಿಂದ ಮುಸ್ಸಂಜೆಯವರೆಗಿನ ಹರತಾಳದಲ್ಲಿ ಕಲ್ಲು ತೂರಾಟ ಸೇರಿದಂತೆ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ. ಇಂದು ಮುಂಜಾನೆ ಕೊಲ್ಲಂನಲ್ಲಿ ಪಿಎಫ್ಐ ಬೆಂಬಲಿಗರ ದಾಳಿಗೆ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.