ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರವನ್ನು ಹಳಿಯುವ ಭರದಲ್ಲಿ ಕಾಂಗ್ರೆಸ್ ಪಕ್ಷ ಎಡವಟ್ಟೊಂದನ್ನು ಮಾಡಿಕೊಂಡಿದೆ. ಪೇಸಿಎಂ ಪೋಸ್ಟರ್ಗೆ ಒಪ್ಪಿಗೆ ಪಡೆಯದೆಯೇ ಯುವಕನೊಬ್ಬನ ಫೋಟೋವನ್ನು ಹಾಕಿದೆ.
ನಟ ಅಖಿಲ್ ಅಯ್ಯರ್ ಅವರು ಕರ್ನಾಟಕ ಕಾಂಗ್ರೆಸ್ ಪೇಸಿಎಂ ಪೋಸ್ಟರ್ಗಳಿಗೆ ತಮ್ಮ ಫೋಟೋವನ್ನು ಒಪ್ಪಿಎ ಇಲ್ಲದೆ ಬಳಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಬೆಂಗಳೂರಿನಾದ್ಯಂತ ಸಿಎಂ ಬಸವರಾಜ ಬೊಮ್ಮಾಯಿ ಅವರ ಚಿತ್ರವಿರುವ ಪೇಸಿಎಂ ಪೋಸ್ಟರ್ಗಳನ್ನು ಹಾಕಿದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ ಶೇಕಡಾ 40 ರಷ್ಟು ಕಮಿಷನ್ ಲಂಚ ಪಡೆಯಲಾಗುತ್ತದೆ ಎಂದು ಆರೋಪಿಸಿ “40% ಸರ್ಕಾರ” ಪೋಸ್ಟರ್ಗಳನ್ನು ವಿನ್ಯಾಸಗೊಳಿಸಲಾಗಿದೆ.
ಒಂದು ಪೋಸ್ಟರ್ನಲ್ಲಿ ಅಖಿಲ್ ಅಯ್ಯರ್ ಅವರ ಫೋಟೋವನ್ನು ಬಳಸಲಾಗಿದೆ ಮತ್ತು “ನೀವು ಇನ್ನೂ ನಿಶ್ಚಿಂತರಾಗಿದ್ದೀರಾ?”, “40% ಸರ್ಕಾರದ ಹೊಟ್ಟೆಬಾಕತನವು 54,000 ಕ್ಕೂ ಹೆಚ್ಚು ಯುವಕರನ್ನು ವೃತ್ತಿಜೀವನವನ್ನು ಕಸಿದುಕೊಂಡಿದೆ” ಎಂದು ಅದರಲ್ಲಿ ಬರೆಯಲಾಗಿದೆ
ಇದರ ವಿರುದ್ಧ ಅಖಿಲ್ ಅಯ್ಯರ್ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ.
I am appalled to see that my face is being used illegally and without my consent for "40% Sarkara" – an @INCIndia campaign that i have nothing to do with.
I will be taking legal action against this.@RahulGandhi @siddaramaiah @INCKarnataka request you to please look into this pic.twitter.com/y7LZ9wRXW9
— Akhil Iyer (@akhiliy) September 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.