ನವದೆಹಲಿ: ಯುವಕರ ತಲೆಕೆಡಿಸಿ ಅವರನ್ನು ಲಷ್ಕರ್ ಎ ತೊಯ್ಬಾ, ಇಸಿಸ್ ಮುಂತಾದ ನಿಷೇಧಿತ ಭಯೋತ್ಪಾದನಾ ಸಂಘಟನೆಗಳಿಗೆ ಸೇರುವಂತೆ ಮಾಡುವಲ್ಲಿ ಪಿಎಫ್ ಐ ನಿರತವಾಗಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ನೀಡಿದೆ.
ಗುರುವಾರ ದೇಶ ವ್ಯಾಪಿಯಾಗಿ ಪಿಎಫ್ಐ ಸ್ಥಳಗಳ ಮೇಲೆ ದಾಳಿ ನಡೆಸಿ ನೂರಕ್ಕೂ ಅಧಿಕ ಕಾರ್ಯಕರ್ತರನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳದಲ್ಲಿ ಅತಿ ಹೆಚ್ಚು ಕಾರ್ಯಕರ್ತರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಬಂಧಿತರನ್ನು ತನ್ನ ವಶಕ್ಕೆ ನೀಡುವಂತೆ ಎನ್ಐಎ ಕೇರಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವೇಳೆ ಸ್ಪೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದೆ.
ಪಿಎಫ್ಐ ಸಂಘಟನೆಯು ಭಾರತ ಮತ್ತು ವಿದೇಶದಿಂದ ಹಣವನ್ನು ಸಂಗ್ರಹಿಸಿ ಆ ಹಣವನ್ನು ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ ಮತ್ತು ದೆಹಲಿಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಬಳಸುತ್ತಿದೆ. ದೇಶ ವಿರೋಧಿ ಕೃತ್ಯವನ್ನು ನಡೆಸುವಂತೆ ಈ ಸಂಘಟನೆಯು ಯುವಕರನ್ನು ಪ್ರೇರೇಪಿಸಿದೆ ಎಂದಿದೆ.
ಈ ಸಂಘಟನೆಯು ಉಗ್ರಗಾಮಿಗಳ ತರಬೇತಿ ಚಟುವಟಿಕೆಗಳಲ್ಲಿ ಭಾಗಿಯಾಗಿದೆ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.