ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ 2020-21ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಎನ್ಎಸ್ಎಸ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಇಂದು ಒಟ್ಟು 42 ಪ್ರಶಸ್ತಿಗಳನ್ನು ನೀಡಲಾಯಿತು. ಎರಡು ವಿಶ್ವವಿದ್ಯಾನಿಲಯಗಳು, ಹತ್ತು ಎನ್ಎಸ್ಎಸ್ ಘಟಕಗಳು, ಅವುಗಳ ಕಾರ್ಯಕ್ರಮ ಅಧಿಕಾರಿಗಳು ಮತ್ತು 30 ಎನ್ಎಸ್ಎಸ್ ಸ್ವಯಂಸೇವಕರು ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್, ಯುವ ವ್ಯವಹಾರಗಳ ಕಾರ್ಯದರ್ಶಿ ಸಂಜಯ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಯುವ ವ್ಯವಹಾರಗಳ ಇಲಾಖೆಯು ಪ್ರತಿ ವರ್ಷ ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿಯನ್ನು ನೀಡುತ್ತದೆ.
ಎನ್ಎಸ್ಎಸ್ ಕೇಂದ್ರೀಯ ವಲಯದ ಯೋಜನೆಯಾಗಿದ್ದು, ಇದನ್ನು ಸ್ವಯಂಪ್ರೇರಿತ ಸಮುದಾಯ ಸೇವೆಯ ಮೂಲಕ ವಿದ್ಯಾರ್ಥಿ ಯುವಕರ ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸುವ ಪ್ರಾಥಮಿಕ ಉದ್ದೇಶದೊಂದಿಗೆ 1969 ರಲ್ಲಿ ಪ್ರಾರಂಭಿಸಲಾಯಿತು. ಎನ್ಎಸ್ಎಸ್ನ ಸೈದ್ಧಾಂತಿಕ ದೃಷ್ಟಿಕೋನವು ಮಹಾತ್ಮ ಗಾಂಧಿಯವರ ಆದರ್ಶಗಳಿಂದ ಪ್ರೇರಿತವಾಗಿದೆ. NSS ನ ಧ್ಯೇಯವಾಕ್ಯವೆಂದರೆ “ನಾನಲ್ಲ, ಆದರೆ ನೀನುʼ ಎಂಬುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.