ಚೆನ್ನೈ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರ ಬಂಧನದ ನಂತರ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಾಯಕರಿಗೆ ಸೇರಿದ ಸ್ಥಳಗಳ ಮೇಲೆ ಅನೇಕ ದಾಳಿಗಳು ನಡೆಯುತ್ತಿವೆ, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಕದಡುವವರ ವಿರುದ್ಧ ತಮಿಳುನಾಡು ಪೊಲೀಸರು ಭಾನುವಾರ ಎಚ್ಚರಿಕೆ ನೀಡಿದ್ದಾರೆ.
ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನು ದುಷ್ಕರ್ಮಿಗಳಿಗೆ ಪೊಲೀಸರು ರವಾನಿಸಿದ್ದಾರೆ.
ಗುರುವಾರದಿಂದ ಬಿಜೆಪಿ, ಆರ್ಎಸ್ಎಸ್ ನಾಯಕರ ಆವರಣದಲ್ಲಿ ಹಲವು ಪೆಟ್ರೋಲ್ ಬಾಂಬ್ ದಾಳಿಗಳು ನಡೆದ ಬಗ್ಗೆ ವರದಿಯಾಗಿವೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯು ರಾಷ್ಟ್ರವ್ಯಾಪಿಯಾಗಿ ನಡೆಸಿದ ಕಾರ್ಯಾಚರಣೆಯ ಭಾಗವಾಗಿ ತಮಿಳುನಾಡಿನ ಪದಾಧಿಕಾರಿಗಳು ಸೇರಿದಂತೆ 11 ಪಿಎಫ್ಐ ಸದಸ್ಯರನ್ನು ಬಂಧಿಸಿದೆ. ಇದರ ನಂತರ ಕೊಯಮತ್ತೂರು, ಪೊಲ್ಲಾಚಿಯಲ್ಲಿ ಆರ್ಎಸ್ಎಸ್, ಬಿಜೆಪಿ ಕಛೇರಿಗಳ ಮೇಲೆ ದಾಳಿ ನಡೆದ ವರದಿಯಾಗಿವೆ. , ರಾಮನಾಥಪುರಂ, ಈರೋಡ್ ಮತ್ತು ತಾಂಬರಂನಲ್ಲೂ ದಾಳಿಗಳಾಗಿವೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೈಲೇಂದ್ರ ಬಾಬು, ದಾಳಿಗೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 250 ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೀಮೆಎಣ್ಣೆ ಬಾಟಲಿ ಎಸೆದ ಕೆಲವು ಅಪರಾಧಿಗಳನ್ನು ಬಂಧಿಸಲಾಗಿದೆ. ಅವರನ್ನು ಸಕ್ರಿಯವಾಗಿ ತನಿಖೆ ನಡೆಸಲಾಗುತ್ತಿದೆ. ಅವರ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕ ಶಾಂತಿ ಕದಡುವ ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗುವುದು ಎಂದು ನಾವು ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಡಿಜಿಪಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.