ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರು ನಗರದ ಚಾಮುಂಡಿ ಬೆಟ್ಟದ ಆವರಣದಲ್ಲಿ ಅದ್ದೂರಿ ದಸರಾ ಉತ್ಸವಕ್ಕೆ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ದಸರಾ ಉತ್ಸವವನ್ನು ದೇಶದ ಮೊದಲ ಪ್ರಜೆ ನೆರವೇರಿಸಿದ್ದಾರೆ.
ಬೆಳ್ಳಿ ಪಲ್ಲಕ್ಕಿಯಲ್ಲಿ ಕುಳಿತ ನಾಡ ದೇವಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, :ದೇವಿ ಚಾಮುಂಡೇಶ್ವರಿಗೆ ನನ್ನ ಮನಃಪೂರ್ವಕ ನಮಸ್ಕಾರಗಳು, ಎಲ್ಲ ಸಹೋದರ ಸಹೋದರಿಯರಿಗೆ ನನ್ನ ಹೃದಯಪೂರ್ವಕ ನಮಸ್ಕಾರಗಳು ಎಂದು ರಾಷ್ಟ್ರಪತಿ ಕನ್ನಡದಲ್ಲಿ ಹೇಳಿದರು. ಬಳಿಕ ಸಂಸ್ಕೃತದಲ್ಲಿ ಚಾಮುಂಡೇಶ್ವರಿ ಶ್ಲೋಕ ಪಠಿಸಿದರು. ತಾಯಿ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ನಾನು ಪ್ರಾರ್ಥಿಸಿದ್ದೇನೆ. ಭಕ್ತಿ, ಸ್ವಾತಂತ್ರ್ಯಕ್ಕೆ ಕರ್ನಾಟಕ ಹೆಸರುವಾಸಿಯಾಗಿದೆ. ದಸರಾ ಉದ್ಘಾಟನೆಗೆ ಬಂದಿರುವುದು ನನಗೆ ಸಂತಸ ತಂದಿದೆ” ಎಂದರು.
“ಭಕ್ತಿ, ಸಮಾನತೆ, ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ. ಮಕ್ಕಳ ಶಾಲಾ ದಾಖಲಾತಿಯಲ್ಲೂ ಸರ್ಕಾರವು ನೂರಕ್ಕೆ ನೂರರಷ್ಟು ಸಾಧನೆ ಮಾಡಿರುವುದು ಶ್ಲಾಘನೀಯ” ಎಂದರು.
“ರಾಜ್ಯದಲ್ಲಿ ರಾಣಿ ಅಬ್ಬಕ್ಕ ಕಿತ್ತೂರು ಚೆನ್ನಮ್ಮ ವನಕೆ ಓಬವ್ವ ಮುಂತಾದ ಮಹಿಳಾ ಮಾದರಿ ನಾಯಕರಿದ್ದಾರೆ. ಮಹಿಷಾಸುರನನ್ನು ದೇವಿ ಚಾಮುಂಡಿ ಕೊಂದ ನಂತರ ಆಧ್ಯಾತ್ಮಿಕ ಮಹತ್ವವನ್ನು ಪಡೆದಿರುವ ಕ್ಷೇತ್ರ ಇದಾಗಿದೆ. ದಸರಾ ಉತ್ಸವ ಪರಂಪರೆಯೊಂದಿಗೆ ಮುನ್ನಡೆಯಲು ಅವಕಾಶ ನೀಡುತ್ತದೆ ಎಂದಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಿಲ್ಲಾಡಳಿತದಿಂದ ಮೈಸೂರು ರೇಷ್ಮೆ ಸೀರೆಯನ್ನ ಗಿಫ್ಟ್ ನೀಡಲಾಗಿತ್ತು. ಈ ಸೀರೆಯನ್ನೇ ಉಟ್ಟುಕೊಂಡು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಬಂದಿದ್ದು ವಿಶೇಷವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.