ನವದೆಹಲಿ: ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಗೌರವಾರ್ಥವಾಗಿ ಚಂಡೀಗಢ ವಿಮಾನ ನಿಲ್ದಾಣವನ್ನು ಮರುನಾಮಕರಣ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ನಾಳೆ ಮರುನಾಮಕರಣ ನಡೆಯಲಿದೆ.
ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಕಳೆದ ತಿಂಗಳು ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಶಹೀದ್-ಎ-ಆಜಮ್ ಭಗತ್ ಸಿಂಗ್ ಹೆಸರನ್ನು ಇಡಲು ಒಪ್ಪಿಗೆ ನೀಡಿದ್ದವು. ರೂ 485 ಕೋಟಿ ವೆಚ್ಚದ ವಿಮಾನ ನಿಲ್ದಾಣ ಯೋಜನೆಯು ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ಮತ್ತು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳ ಜಂಟಿ ಉದ್ಯಮವಾಗಿದೆ.
ಈ ಹಿಂದೆ, ಎರಡೂ ರಾಜ್ಯಗಳ ಜಂಟಿ ರಾಜಧಾನಿಯಾಗಿರುವ ಕಾರಣ ವಿಮಾನ ನಿಲ್ದಾಣಕ್ಕೆ ಚಂಡೀಗಢದ ಹೆಸರನ್ನು ಇಡುವುದಕ್ಕೆ ಹರಿಯಾಣ ಆಕ್ಷೇಪಿಸಿತ್ತು. ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಪಂಜಾಬ್ನೊಂದಿಗೆ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರನ್ನು ಇಡಲು ಒಪ್ಪಿದ್ದರು. ಆದರೆ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿಯು ಹರಿಯಾಣದಲ್ಲಿ ಅಧಿಕಾರ ವಹಿಸಿಕೊಂಡ ನಂತರ, 2015 ರಲ್ಲಿ ಭಗತ್ ಸಿಂಗ್ ಅವರ ಹೆಸರನ್ನಿಡಲು ತಮ್ಮ ಅಭಿಪ್ರಾಯವನ್ನು ಮಂಡಿಸಿದರು. 2017 ರಲ್ಲಿ ಪಂಜಾಬ್ ವಿಧಾನ ಸಭೆಯು ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರಿಡಬೇಕು ಎಂಬ ನಿರ್ಣಯವನ್ನು ಅಂಗೀಕರಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.