ನವದೆಹಲಿ: ಶಹೀದ್ ಇ ಆಜಂ ಭಗತ್ ಸಿಂಗ್ ಅವರ 115 ನೇ ಜನ್ಮದಿನವಾದ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚಂಡೀಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಿದ್ದಾರೆ.
ಕಳೆದ ಭಾನುವಾರ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಂಡೀಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದರು.
ವಿಮಾನ ನಿಲ್ದಾಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪಂಜಾಬ್ ಗವರ್ನರ್ ಬನ್ವಾರಿ ಲಾಲ್ ಪುರೋಹಿತ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ಕೇಂದ್ರ ಸಚಿವ ಡಾ.ವಿಜಯ್ ಕುಮಾರ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಹರಿಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ, ಹರಿಯಾಣ ಗೃಹ ಸಚಿವ ಅನಿಲ್ ವಿಜ್, ಸಂಸದೆ ಕಿರಣ್ ಖೇರ್ ಉಪಸ್ಥಿತರಿದ್ದರು.
ಅತಿಥಿಗಳನ್ನು ಸ್ವಾಗತಿಸಿದ ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿಜಯ್ ಕುಮಾರ್ ಸಿಂಗ್ ಅವರು ಭಗತ್ ಸಿಂಗ್ ಅವರ ಸರ್ವೋಚ್ಚ ತ್ಯಾಗವನ್ನು ಸ್ಮರಿಸಿದರು. ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.