ನವದೆಹಲಿ: ಸೆಂಟ್ರಲ್ ವಿಸ್ಟಾ ಕಟ್ಟಡದ ಮೇಲಿರುವ ರಾಷ್ಟ್ರೀಯ ಲಾಂಛನವು 2005ರ ರಾಜ್ಯ ಲಾಂಛನ (ಅನುಚಿತ ಬಳಕೆ ವಿರುದ್ಧ ನಿಷೇಧ) ಕಾಯಿದೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಲಾಂಛನವನ್ನು ನ್ಯಾಯಮೂರ್ತಿಗಳಾದ ಎಂಆರ್ ಷಾ ಮತ್ತು ಕೃಷ್ಣ ಮುರಾರಿ ಅವರ ಪೀಠ ನೋಡಿದ್ದು, ಅವರು ಕಾನೂನು ಉಲ್ಲಂಘನೆಯಾಗಿಲ್ಲ ಎಂಬುದಾಗಿ ತೀರ್ಮಾನಿಸಿದ್ದಾರೆ.
“ಲಾಂಛನವು ನೀಡುವ ಅನಿಸಿಕೆ ವ್ಯಕ್ತಿಯ ಮನಸ್ಸಿನ ಮೇಲೆ ಅವಲಂಬಿತವಾಗಿದೆ” ಎಂದು ನ್ಯಾಯಾಲಯವು ಹೇಳಿದೆ.
ಲಾಂಛನ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದೆ.
ವಕೀಲರಾದ ಅಲ್ದಾನೀಶ್ ರೀನ್ ಮತ್ತು ರಮೇಶ್ ಕುಮಾರ್ ಮಿಶ್ರಾ ಅವರು ಅರ್ಜಿ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ಲಾಂಛನದಲ್ಲಿ ಚಿತ್ರಿಸಲಾಗಿರುವ ಸಿಂಹಗಳು “ಉಗ್ರ ಮತ್ತು ಆಕ್ರಮಣಕಾರಿ”ಯಾಗಿವೆ ಎಂದು ಪ್ರತಿಪಾದಿಸಿದ್ದರು. ಇಲ್ಲಿನ ಸಿಂಹಗಳನ್ನು ಬಾಯಿ ತೆರೆದಿರುವಂತೆ ಮತ್ತು ಕೋರೆಹಲ್ಲು ಗೋಚರಿಸುವಂತೆ ಕೆತ್ತಲಾಗಿದೆ ಎಂದು ಪ್ರತಿಪಾದಿಸಿದ್ದರು. ಸಾರನಾಥ ವಸ್ತುಸಂಗ್ರಹಾಲಯದಲ್ಲಿನ ಸಿಂಹಗಳು ಶಾಂತವಾಗಿ ಮತ್ತು ಸಂಯೋಜನೆಯಾಗಿ ಕಂಡುಬರುತ್ತವೆ ಎಂದಿದ್ದರು.
ಈ ವಾದದಲ್ಲಿ ತಿರುಳಿಲ್ಲ ಎಂದು ಸುಪ್ರೀಂಕೋರ್ಟ್ ಅರ್ಜಿ ವಜಾ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.