ನವದೆಹಲಿ: ದೇಶದಲ್ಲಿ ವಿಐಪಿ ಸಂಸ್ಕೃತಿ ಅಥವಾ ಲಾಲ್ ಬತ್ತಿ ಸಂಸ್ಕೃತಿಯ ವಿರುದ್ಧ ದಿಟ್ಟ ನಿಲುವು ತೆಗೆದುಕೊಂಡವರು ಪ್ರಧಾನಿ ನರೇಂದ್ರ ಮೋದಿ. ಸ್ವತಃ ಪ್ರಧಾನಿಯಾಗಿ ಅವರು ಕೂಡ ತಮ್ಮ ನಿಲುವಿಗೆ ಬದ್ಧರಾಗಿ ನಡೆದುಕೊಳ್ಳುತ್ತಿದ್ದಾರೆ. ಆಂಬುಲೆನ್ಸ್ಗೆ ದಾರಿ ಮಾಡಿಕೊಡುವ ಸಲುವಾಗಿ ತಮ್ಮ ಬೆಂಗಾಬಲು ಪಡೆಗೆ ವಾಹನ ನಿಲ್ಲಿಸುವಂತೆ ಆದೇಶಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕೂಡ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಲು ಆದೇಶ ನೀಡಿರುವ ವಿಡಿಯೋ ಭಾರಿ ವೈರಲ್ ಆಗಿದೆ.
ತಮ್ಮ ತವರು ರಾಜ್ಯ ಗುಜರಾತ್ಗೆ 2 ದಿನಗಳ ಭೇಟಿ ನೀಡಿರುವ ಪ್ರಧಾನಿ ಮೋದಿ, ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ವಿಐಪಿ ಸಂಸ್ಕೃತಿ ಇಲ್ಲ ಎಂಬುದನ್ನು ಉದಾಹರಣೆಸಹಿತ ಸ್ಪಷ್ಟಪಡಿಸಿದ್ದಾರೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಶುಕ್ರವಾರ ಅಹಮದಾಬಾದ್ನಿಂದ ಗಾಂಧಿನಗರಕ್ಕೆ ಪ್ರಯಾಣಿಸುತ್ತಿದ್ದಾಗ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ನಿಂತಿದೆ.
ಈ ಹಿಂದೆ 2017 ರಲ್ಲಿ, ಪಿಎಂ ಮೋದಿ ಅವರು ವಿಐಪಿ ಬದಲಿಗೆ ಇಪಿಐ (ಎಲ್ಲರೂ ಮುಖ್ಯ) ಎಂದು ಹೇಳಿದ್ದರು. ಪ್ರತಿಯೊಬ್ಬ ವ್ಯಕ್ತಿಗೂ ಮೌಲ್ಯ ಮತ್ತು ಪ್ರಾಮುಖ್ಯತೆ ಇರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ವಿಐಪಿ ಸಂಸ್ಕೃತಿಯ ಪ್ರತೀಕವಾದ ವಾಹನಗಳ ಮೇಲೆ ಕೆಂಪು ದೀಪಗಳ ಬಳಕೆಯನ್ನು ಪ್ರಧಾನಿ ಮೋದಿಯವರು ಕೊನೆಗೊಳಿಸಿರುವುದು ಗಮನಾರ್ಹವಾಗಿದೆ.
On the way to Gandhinagar from Ahmedabad, PM Modi Ji's carcade stops to give way to an ambulance.
No VIP Culture in the Modi era❌ pic.twitter.com/rCtiF0VVaJ
— Dr. Rutvij Patel (@DrRutvij) September 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.