ಶ್ರೀನಗರ: ಪಾಕಿಸ್ಥಾನದ ಭಯೋತ್ಪಾದಕರು ಜಮ್ಮು ಮತ್ತ ಕಾಶ್ಮೀರದಲ್ಲಿ ನಡೆಯುತ್ತಿರುವ ಅಗ್ನಿವೀರ್ ನೇಮಕಾತಿ ರ್ಯಾಲಿಗಳನ್ನು ಗುರಿಯಾಗಿಸುತ್ತಿದ್ದಾರೆ ಎಂಬ ಅಂಶವನ್ನು ಭದ್ರತಾಪಡೆಗಳು ಬಹಿರಂಗಪಡಿಸಿವೆ.
ಈ ಮೊದಲು ಸೆಪ್ಟೆಂಬರ್ 17 ರಂದು, ಜಮ್ಮು ಮತ್ತು ಕಾಶ್ಮೀರದ 10 ಜಿಲ್ಲೆಗಳು ಮತ್ತು ಲಡಾಖ್ನ ಎರಡು ಜಿಲ್ಲೆಗಳ ಪುರುಷ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿ ರ್ಯಾಲಿಗಳು ಬಾರಾಮುಲ್ಲಾದಲ್ಲಿ ಪ್ರಾರಂಭವಾಗಿದೆ. ಇದರ ಮೇಲೆ ಉಗ್ರರ ಕರಿನೆರಳು ಬಿದ್ದಿದೆ.
ಬಾರಾಮುಲ್ಲಾ ಎನ್ಕೌಂಟರ್ನಲ್ಲಿ ಭಾರತೀಯ ಸಶಸ್ತ್ರ ಪಡೆಗಳಿಂದ ಹತ್ಯೆಯಾದ ಪಾಕಿಸ್ತಾನಿ ಭಯೋತ್ಪಾದಕರು ಅಗ್ನಿವೀರರ ರ್ಯಾಲಿಗಳ ಮೇಲೆ ದಾಳಿ ಮಾಡುವ ಉದ್ದೇಶದೊಂದಿಗೆ ನಿಯೋಜಿತಗೊಂಡಿದ್ದರು ಎಂಬ ಅಂಶ ಬಹಿರಂಗಗೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಪಟ್ಟಾನ್ ಪ್ರದೇಶದ ಯಡಿಪೋರಾದಲ್ಲಿ ಶುಕ್ರವಾರ ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ನಂತರ ಈ ಮಾಹಿತಿ ಹೊರಬಿದ್ದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಎಸ್ಪಿ ಬಾರಾಮುಲ್ಲಾ ರಯೀಸ್ ಮೊಹಮ್ಮದ್ ಭಟ್, “ಬೆಳಗ್ಗೆ, ಬಾರಾಮುಲ್ಲಾದ ಯಡಿಪೋರಾ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳಿಂದ ನಮಗೆ ಮಾಹಿತಿ ಬಂದಿತು. ಮಾಹಿತಿಯ ನಂತರ, ಸೇನಾ ಅಧಿಕಾರಿಗಳು ಮತ್ತು ಕಾಶ್ಮೀರ ಪೊಲೀಸರು ಆಗಮಿಸಿದಾಗ ಸ್ಥಳದಲ್ಲಿದ್ದ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು, ಇದು ಭಯೋತ್ಪಾದಕರನ್ನು ತಟಸ್ಥಗೊಳಿಸಲು ಎನ್ಕೌಂಟರ್ಗೆ ಕಾರಣವಾಯಿತು. ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ” ಎಂದಿದ್ದಾರೆ.
“ಗುಪ್ತಚರಗಳ ಪ್ರಕಾರ, ಭಯೋತ್ಪಾದಕರು ಶಾಂತಿ ಕದಡುವ ಉದ್ದೇಶದಿಂದ ಅಗ್ನಿವೀರ್ ರ್ಯಾಲಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ಈ ಪ್ರದೇಶದಲ್ಲಿ ಜಾಗರೂಕರಾಗಿರಲು ನಾವು ಸಾರ್ವಜನಿಕರಿಗೆ ಮನವಿ ಮಾಡುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.