News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಫ್ಘಾನಿಸ್ಥಾನದ ಶೈಕ್ಷಣಿಕ ಸ್ಥಳಗಳ ಮೇಲೆ ದಾಳಿ: ಭಾರತ ಖಂಡನೆ

ನವದೆಹಲಿ: ಅಫ್ಘಾನಿಸ್ಥಾನದ ಶೈಕ್ಷಣಿಕ ಸ್ಥಳಗಳಲ್ಲಿ ಅಮಾಯಕ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿಗಳು ನಡೆಯುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದೆ.

ಕಾಬೂಲ್‌ನ ದಶ್ತ್-ಎ-ಬರ್ಚಿಯಲ್ಲಿರುವ ಕಾಜ್ ಶೈಕ್ಷಣಿಕ ಕೇಂದ್ರದಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್‌ನಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಅವರು ಭಾರತದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕೂಡ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. “ಭದ್ರತಾ ಮಂಡಳಿಯ ಸದಸ್ಯರು ಎಲ್ಲಾ ಅಫ್ಘನ್ನರ ಶಿಕ್ಷಣದ ಹಕ್ಕನ್ನು ಪ್ರತಿಪಾದಿಸಿದ್ದಾರೆ. ಅವರ ಶಾಂತಿ ಮತ್ತು ಭದ್ರತೆಗೆ  ಕೊಡುಗೆಯನ್ನು ನೀಡುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅವರು ಶಿಕ್ಷಣದ ಹಕ್ಕನ್ನು ಆನಂದಿಸುವಂತೆ ಮಾಡುವ  ಶಾಲೆಗಳ ವಿರುದ್ಧದ ದಾಳಿಯ ಪರಿಣಾಮಗಳ ಬಗ್ಗೆ ಸದಸ್ಯರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ”ಎಂದು UNSC ಯ ಹೇಳಿಕೆ ತಿಳಿಸಿದೆ.

ವರದಿಗಳ ಪ್ರಕಾರ, ದಷ್ಟ್-ಎ-ಬರ್ಚಿಯಲ್ಲಿ ನಡೆದ ದಾಳಿಯನ್ನು ಆತ್ಮಹತ್ಯಾ ಬಾಂಬರ್ ಮೂಲಕ ನಡೆಸಲಾಗಿದೆ ಮತ್ತು ಸುಮಾರು 25 ಜನರ ಸಾವು ಸಂಭವಿಸಿದೆ. ಸತ್ತವರಲ್ಲಿ ಅನೇಕರು ವಿದ್ಯಾರ್ಥಿಗಳು. ಇದಲ್ಲದೆ, ಬಾಂಬ್ ಸ್ಫೋಟದಿಂದಾಗಿ 56 ಜನರು ಗಾಯಗೊಂಡಿದ್ದಾರೆ. ಆದರೆ, ಕೆಲವು ವರದಿಗಳು ಸಾವಿನ ಸಂಖ್ಯೆಯು ತುಂಬಾ ಹೆಚ್ಚಾಗಿದ್ದು, ಬಹುಶಃ 100 ರ ಸಮೀಪವಿದೆ ಎಂದಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top