News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2 ದಿನಗಳ ಗುಜರಾತ್‌ ಪ್ರವಾಸದಲ್ಲಿ ಮುರ್ಮು: ಸಬರಮತಿ ಆಶ್ರಮಕ್ಕೆ ಭೇಟಿ

ಅಹ್ಮದಾಬಾದ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಹಮದಾಬಾದ್‌ನ ಸಬರಮತಿಯಲ್ಲಿರುವ ಮಹಾತ್ಮ ಗಾಂಧಿ ಆಶ್ರಮಕ್ಕೆ ಭೇಟಿ ನೀಡುವ ಮೂಲಕ ತಮ್ಮ ಎರಡು ದಿನಗಳ ಗುಜರಾತ್ ಪ್ರವಾಸವನ್ನು ಪ್ರಾರಂಭಿಸಿದರು.

ಗಾಂಧಿನಗರದಲ್ಲಿ ನಡೆಯುವ ಸಮಾರಂಭದಲ್ಲಿ  ಮುರ್ಮು ಅವರು 1,330 ಕೋಟಿ ರೂ.ಗಳ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಇದು ರಾಷ್ಟ್ರದ ಪ್ರಥಮ ಪ್ರಜೆಯಾಗಿ ಅವರ ಮೊಲದ ಗುಜರಾತ್‌ ಭೇಟಿಯಾಗಿದೆ.

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಹಮದಾಬಾದ್‌ನ ಸಬರಮತಿ ಗಾಂಧಿ ಆಶ್ರಮದಲ್ಲಿ ಮಹಾತ್ಮ ಗಾಂಧಿಯವರ ಚರಕ ತಿರುಗಿಸಿದರು. ಅಹಮದಾಬಾದ್‌ನ ಸಬರಮತಿಯ ಗಾಂಧಿ ಆಶ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 153 ನೇ ಜನ್ಮದಿನದಂದು ರಾಷ್ಟ್ರಪತಿಗಳು ಗೌರವ ಸಲ್ಲಿಸಿದರು. ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಮತ್ತು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು.

ಇಂದು ದ್ರೌಪದಿ ಮುರ್ಮು ಅವರು ಗಾಂಧಿನಗರದ GMERS ನಲ್ಲಿ ಆರೋಗ್ಯ, ನೀರಾವರಿ, ನೀರು ಸರಬರಾಜು ಮತ್ತು ಬಂದರು ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಸಂಜೆಯ ನಂತರ,  ಮುರ್ಮು ಗಾಂಧಿನಗರದಲ್ಲಿ ಅವರ ಗೌರವಾರ್ಥವಾಗಿ ಗುಜರಾತ್ ಸರ್ಕಾರವು ಆಯೋಜಿಸಿದ ನಾಗರಿಕ ಸ್ವಾಗತ ಕಾರ್ಯಕ್ರಮದಲ್ಲ ಭಾಗವಹಿಸಲಿದ್ದಾರೆ.

ಅಕ್ಟೋಬರ್ 4 ರಂದು, ಅವರು ‘ಹರ್‌ಸ್ಟಾರ್ಟ್’ ಅನ್ನು ಪ್ರಾರಂಭಿಸಲಿದ್ದಾರೆ. ಇದು ಮಹಿಳಾ ಉದ್ಯಮಿಗಳಿಗಾಗಿ ಗುಜರಾತ್ ವಿಶ್ವವಿದ್ಯಾಲಯದ ಸ್ಟಾರ್ಟ್ಅಪ್ ವೇದಿಕೆ.‌ ಅವರು ಅಹಮದಾಬಾದ್‌ನ ಗುಜರಾತ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಮತ್ತು ಬುಡಕಟ್ಟು ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top