News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎಲ್ಲಾ ಉತ್ಪನ್ನಗಳ ಮೇಲೆ 20% ರಿಯಾಯಿತಿ ಘೋಷಿಸಿದ ಕೆವಿಐಸಿ

ನವದೆಹಲಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ಎಲ್ಲಾ ಉತ್ಪನ್ನಗಳ ಮೇಲೆ ಶೇಕಡಾ 20 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಅವರು ಕೇಂದ್ರ ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿರುವ ಭಾರತದ ಪ್ರಮುಖ ಮಳಿಗೆಯಾದ ಖಾದಿ ಭವನಕ್ಕೆ ಭೇಟಿ ನೀಡಿ ಮಾರಾಟವನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರು ರಿಯಾಯತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಗಾಂಧಿ ಜಯಂತಿಯಾದ ನಿನ್ನೆ ಖಾದಿ ಶೋರೂಂಗಳು ಒಂದು ದಿನದಲ್ಲಿ ಅತಿ ಹೆಚ್ಚು ಮಾರಾಟವನ್ನು ದಾಖಲಿಸಿದೆ. ಖಾದಿ ಮೇಲೆ ಶೇಕಡಾ 20 ಮತ್ತು ವಿಲೇಜ್ ಇಂಡಸ್ಟ್ರೀಸ್ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ಇರುತ್ತದೆ.

ಕೆವಿಐಸಿ ನವದೆಹಲಿಯ ಸಂಸತ್ತಿನ ಅನೆಕ್ಸ್‌ನಲ್ಲಿ ಖಾದಿ ಪ್ರದರ್ಶನವನ್ನು ಸ್ಥಾಪಿಸಿದೆ, ಇದು ಅಕ್ಟೋಬರ್ 5 ರವರೆಗೆ ಮುಂದುವರಿಯುತ್ತದೆ. ಖಾದಿ ಪ್ರದರ್ಶನವು ಖಾದಿ ಮತ್ತು ಗ್ರಾಮೋದ್ಯೋಗದ ಉತ್ಪನ್ನಗಳನ್ನು ಮಾರಾಟ ಮಾಡಲಿದೆ. ಕೆವಿಐಸಿಯು ನವದೆಹಲಿಯ ಕುತುಬ್ ಮಿನಾರ್‌ನಲ್ಲಿ ಸಾರ್ವಜನಿಕರಿಗಾಗಿ ಡಿಸ್ಪ್ಲೇ ಕಮ್ ಸೇಲ್ ಸ್ಟಾಲ್ ಅನ್ನು ಸಹ ಸ್ಥಾಪಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top