News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೈಸೂರು ದಸರಾ: ಜಂಬೂ ಸವಾರಿಗೆ ಸಕಲ ಸಿದ್ಧತೆ

ನವದೆಹಲಿ: ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ನಾಳೆ ವಿಜಯದಶಮಿಯಂದು ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಸ್.ಟಿ ಸೋಮಶೇಖರ್ ಅವರು, “ನಾಳೆ ನಡೆಯುವ ಜಂಬೂ ಸವಾರಿಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಈ ಬಾರಿಯ ಜಂಬೂ ಸವಾರಿಯಲ್ಲಿ 47 ಸ್ತಬ್ಧ ಚಿತ್ರಗಳು ಮತ್ತು ಕಲಾತಂಡಗಳು ಭಾಗವಹಿಸಲಿವೆ” ಎಂದಿದ್ದಾರೆ.

ಜಂಬೂ ಸವಾರಿಯ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದ್ದು ಸಾವಿರಾರು ಸಿಸಿಟಿವಿಗಳು ಕಣ್ಗಾವಲು ಇಟ್ಟಿವೆ. ಪೊಲೀಸ್ ಕಮಿಷನರ್ ಭದ್ರತೆ ಹಾಗೂ ಮೆರವಣಿಗೆ ಉಸ್ತುವಾರಿ ವಹಿಸಲಿದ್ದಾರೆ.

ಭದ್ರತೆಯ ಸಲುವಾಗಿ ನಾಲ್ಕು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ವಾಹನಗಳಿಗೆ ಪ್ರತ್ಯೇಕ ಪ್ಯಾಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು, ಮುಖ್ಯಮಂತ್ರಿ, ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ಸುಮಾರು 15 ರಿಂದ 20 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎನ್ನಲಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ ಎರಡು ವರ್ಷಗಳ ಕಾಲ ಮಂಕಾಗಿ ನಡೆದಿದ್ದ ಮೈಸೂರು ದಸರಾ ಈ ಬಾರಿ ಅತ್ಯಂತ ಅದ್ಧೂರಿಯಾಗಿ ನಡೆದಿದೆ. ನಾಳೆ ಜಂಬೂ ಸವಾರಿ ಮೂಲಕ ದಸರಾ ಸಂಭ್ರಮ ಮುಕ್ತಾಯವಾಗಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top