News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಷ್ಟ್ರಪತಿಗೆ ಕಾಂಗ್ರೆಸ್‌ ನಾಯಕನಿಂದ ಮತ್ತೆ ಅವಮಾನ: ವ್ಯಾಪಕ ಆಕ್ರೋಶ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಾಂಗ್ರೆಸ್‌ ಮತ್ತೆ ಅವಮಾನ ಮಾಡಿದೆ. ಮುರ್ಮು ಅವರಂತಹ ರಾಷ್ಟ್ರಪತಿಗಳು ನಮಗೆ ಸಿಗಬಾರದಿತ್ತು ಎಂದು ಕಾಂಗ್ರೆಸ್‌ ನಾಯಕ ಉದಿತ್ ರಾಜ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ.

ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಮತ್ತು ಅವಮಾನಕರ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಉದಿತ್ ರಾಜ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಕಳುಹಿಸಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಭಾರತದ ಮೊದಲ ಬುಡಕಟ್ಟು ಜನಾಂಗದ ರಾಷ್ಟ್ರಪತಿಗೆ ಅವಮಾನಿಸಿದ್ದಕ್ಕಾಗಿ ಉದಿತ್‌ ರಾಜ್ ಮತ್ತು ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು‌ ಬಿಜೆಪಿ ಒತ್ತಾಯಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಮುರ್ಮು ಇತ್ತೀಚೆಗೆ  ಭಾಷಣ ಮಾಡಿ,  “ಭಾರತದ ಶೇಕಡಾ 70 ರಷ್ಟು ಜನರು ಗುಜರಾತ್‌ನ ಉಪ್ಪನ್ನು ಸೇವಿಸುತ್ತಾರೆ. ರಾಜ್ಯವು ಪ್ರಮುಖ ಉಪ್ಪು ಉತ್ಪಾದಕನಾಗಿದೆ” ಎಂದಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಉದಿತ್ ರಾಜ್ ಅವರು, ಇಂತಹ ರಾಷ್ಟ್ರಪತಿ ಯಾವ ರಾಷ್ಟ್ರಕ್ಕೂ ಸಿಗಬಾರದು. ಉಪ್ಪು ತಿಂದು ಚಮಚಗಿರಿ ಮಾಡುತ್ತಿದ್ದಾರೆ ಎಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top