News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉಕ್ರೇನ್‌ ಸಮಗ್ರತೆ ಬೆಂಬಲಿಸಿದ ಮೋದಿಗೆ ಧನ್ಯವಾದ ಅರ್ಪಿಸಿದ ಝೆಲೆನ್ಸ್ಕಿ

ಕೈವ್:  ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ ‘ಭಾರತದ ಬೆಂಬಲ’ಕ್ಕಾಗಿ ಪ್ರಧಾನಿ ಮೋದಿಯವರಿಗೆ ಝೆಲೆನ್ಸ್ಕಿ  ಧನ್ಯವಾದ ಅರ್ಪಿಸಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ರಷ್ಯಾದ ಔಪಚಾರಿಕ ಭಾಗವೆಂದು ಘೋಷಿಸಿರುವ ನಡುವೆ ಮಂಗಳವಾರ ಉಕ್ರೇನ್‌ ಅಧ್ಯಕ್ಷಕರಿಗೆ ಮೋದಿ ದೂರವಾಣಿ ಕರೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಸಂಭಾಷಣೆಯಲ್ಲಿ,  ಮೋದಿ ಅವರು ಯುದ್ಧವನ್ನು ಶೀಘ್ರವಾಗಿ ನಿಲ್ಲಿಸಲು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯವನ್ನು ಪುನರುಚ್ಚರಿಸಿದರು ಎನ್ನಲಾಗಿದೆ.

ಉಕ್ರೇನ್‌ನ ಸಮಗ್ರತೆಯನ್ನು ಬೆಂಬಲಿಸಿದ್ದಕ್ಕಾಗಿ ಮೋದಿಗೆ ಧನ್ಯವಾದಗಳನ್ನು ಅರ್ಪಿಸಿ ಝೆಲೆನ್ಸ್ಕಿ ಅವರು, ʼಇದು ಯುದ್ಧದ ಸಮಯವಲ್ಲʼ ಎಂಬ ಅವರ  ಇತ್ತೀಚಿನ ಹೇಳಿಕೆಯ ಮಹತ್ವವನ್ನು ಒತ್ತಿ ಹೇಳಿದರು. ಸಮರ್ಕಂಡ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಮಾವೇಶದ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಸಭೆಯ ಬದಿಯಲ್ಲಿ ರಷ್ಯಾ-ಉಕ್ರೇನ್ ಸಂಘರ್ಷದ ಕುರಿತು ಪುಟಿನ್ ಅವರೊಂದಿಗೆ ಮಾತನಾಡಿದ್ದ ವೇಳೆ ಈ ಹೇಳಿಕೆಯನ್ನು ನೀಡಿದ್ದರು.

“ಇಂದಿನ ಯುಗವು ಯುದ್ಧದ ಯುಗವಲ್ಲ, ಮತ್ತು ನಾನು ಈ ಬಗ್ಗೆ ನಿಮ್ಮೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದೇನೆ” ಎಂದು ಪುಟಿನ್‌ಗೆ ಮೋದಿ ಹೇಳಿದ್ದರು.

ಉಜ್ಬೇಕಿಸ್ತಾನ್‌ನಲ್ಲಿ ಉಭಯ ನಾಯಕರ ನಡುವಿನ ಸಂವಾದವನ್ನು ಗಮನಿಸಿದ್ದ ಝೆಲೆನ್ಸ್ಕಿ,  ಪ್ರಧಾನಿ ಮೋದಿಯವರ ಸಂದೇಶದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top