News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಯುಷ್ಮಾನ್‌ ಭಾರತ್‌ ಬಗ್ಗೆ ಜನರ ಪ್ರತಿಕ್ರಿಯೆ ಹಂಚಿಕೊಂಡ ಮೋದಿ

ನವದೆಹಲಿ: ಎಲ್ಲಾ ಭಾರತೀಯ ನಾಗರಿಕರಿಗೆ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮಾ ರಕ್ಷಣೆಯನ್ನು ನೀಡುವ ಆಯುಷ್ಮಾನ್ ಭಾರತ್ ಯೋಜನೆಗೆ ನಾಗರಿಕರು ನೀಡಿದ ಪ್ರತಿಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಹೌದು ಈಗ ಭಾರತದ ಬಡ ಜನರು ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಒಳಪಟ್ಟಿದ್ದಾರೆ ಆದ್ದರಿಂದ ಅವರು ಯಾವುದೇ ಉತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಳ್ಳಬಹುದು. ಅವರು ರೂ. 5 ಲಕ್ಷಗಳ ಆರೋಗ್ಯ ವಿಮೆ ಹೊಂದಿದ್ದಾರೆ. ಆಯುಷ್ಮಾನ್ ಭಾರತ್ ಬಡವರಿಗೆ ವರದಾನವಾಗಿದೆ” ಎಂದು ಟ್ವಿಟರ್‌ ಬಳಕೆದಾರರು ಟ್ವಿಟ್‌ ಮಾಡಿದ್ದಾರೆ. ಇದನ್ನು ಮೋದಿ ರಿಟ್ವಿಟ್‌ ಮಾಡಿದ್ದಾರೆ.

ಅಲ್ಲದೇ ಈ ಯೋಜನೆಯ ಲಾಭವನ್ನು ಭಾರತದಾದ್ಯಂತ ಪಡೆಯಬಹುದು ಎಂದು ಪ್ರಧಾನಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಭಾರತದ ಅತಿದೊಡ್ಡ ಆರೋಗ್ಯ ಮೂಲಸೌಕರ್ಯ ಯೋಜನೆಯಾಗಿದೆ. ಸಾರ್ವಜನಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಸಾಮರ್ಥ್ಯಕ್ಕೆ ಹೆಚ್ಚು ಅಗತ್ಯವಿರುವ ಸೌಕರ್ಯವನ್ನು ಒದಗಿಸಲು ಈ ಯೋಜನೆಯನ್ನು 23ನೇ ಸೆಪ್ಟೆಂಬರ್, 2018 ರಂದು ಕೇಂದ್ರವು ಪ್ರಾರಂಭಿಸಿತು. ಈ ಯೋಜನೆಯು ಸೇವೆಯ ಹಂತದಲ್ಲಿ ಫಲಾನುಭವಿಗಳಿಗೆ ಸೇವೆಗಳಿಗೆ ನಗದುರಹಿತ ಮತ್ತು ಕಾಗದರಹಿತ ಪ್ರವೇಶವನ್ನು ಒದಗಿಸುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top