ಮುಂಬಯಿ: ಜಪಾನಿನ ಕೊಯಾಸನ್ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಈ ವೇಳೆ ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾನಿಲಯ ಮತ್ತು ಕೊಯಾಸನ್ ವಿಶ್ವವಿದ್ಯಾನಿಲಯದ ನಡುವಣ ತಿಳುವಳಿಕೆಯ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ವೇಳೆ ಮಾತನಾಡಿದ ಫಡ್ನಾವಿಸ್, ‘ಈ ಪ್ರತಿಮೆ ಕೊಯಾಸನ್ ಮತ್ತು ಜಪಾನ್ ಜನತೆಗೆ ಮಹಾರಾಷ್ಟ್ರದ ಜನತೆ ನೀಡುತ್ತಿರುವ ಉಡುಗೊರೆ. ಡಾ. ಅಂಬೇಡ್ಕರ್ ಅವರು ನಮಗೆ ಸಮಾನತೆಯ ಮೌಲ್ಯವನ್ನು ಕಲಿಸಿಕೊಟ್ಟಿದ್ದಾರೆ. ಅಲ್ಲದೇ ಅದನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ’ ಎಂದರು.
ಅಲ್ಲದೇ ಕೊಯಾಸನ್ ವಿಶ್ವವಿದ್ಯಾನಿಲಯ 1,200 ವರ್ಷಗಳ ಸಂಭ್ರಮದಲ್ಲಿದೆ, ಭಾರತ ಅಂಬೇಡ್ಕರ್ ಅವರ 125ನೇ ಹುಟ್ಟುಹಬ್ಬ ಆಚರಣೆಯ ಸಂಭ್ರದಲ್ಲಿದೆ ಎಂದು ಸ್ಮರಿಸಿದರು.
ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಸಹಾಯ ಮಾಡಿದ ಕೊಯಾಸನ್ ವಿಶ್ವವಿದ್ಯಾನಿಲಯದ ಗವರ್ನರ್ ಯಶಿನೊಬು ನಿಶಾಕ ಮತ್ತು ಇತರರಿಗೆ ಅವರು ಧನ್ಯವಾದಗಳನ್ನು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.