News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅ.11ರಂದು ಉಜ್ಜಯಿನಿ ಮಹಾಕಾಳೇಶ್ವರ ವಿಸ್ತರಣಾ ಯೋಜನೆ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಕ್ಟೋಬರ್ 11 ರಂದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಶ್ರೀ ಮಹಾಕಾಳೇಶ್ವರ ದೇವಾಲಯ ವಿಸ್ತರಣಾ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ.

ಈ ವೇಳೆ ಮೋದಿ ಅವರು ಉಜ್ಜಯಿನಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗವು ದೇಶದಲ್ಲಿರುವ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ.

ಮಹಾಕಾಲ್ ದೇವಾಲಯದ ಸಂಕೀರ್ಣ ವಿಸ್ತರಣೆ ಯೋಜನೆಯನ್ನು 2017 ರಲ್ಲಿ ಯೋಜಿಸಲಾಗಿದೆ. ಈ ವಿಸ್ತರಣಾ ಯೋಜನೆಯ 800 ಕೋಟಿ ರೂ ಕಾಮಗಾರಿಗಳನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ. ಮೊದಲ ಹಂತದ 351 ಕೋಟಿ ರೂ.ಗಳ ಕಾಮಗಾರಿಗಳು ಪೂರ್ಣಗೊಂಡಿವೆ. ಅಕ್ಟೋಬರ್ 11 ರಂದು ಮೊದಲ ಹಂತದ ಈ ಕಾಮಗಾರಿಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಎರಡನೇ ಹಂತವು 2023-24 ರಲ್ಲಿ ಪೂರ್ಣಗೊಳ್ಳಲಿದೆ. ಈ ಕ್ಷಣಕ್ಕೆ ಸಾಕ್ಷಿಯಾಗುವಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜನರನ್ನು ವಿನಂತಿಸಿದ್ದಾರೆ.

ಮಹಾಕಾಲ್ ದೇವಾಲಯದ ಸಂಕೀರ್ಣದಲ್ಲಿ ನಿರ್ಮಿಸಲಾದ ಕಾರಿಡಾರ್ ಅನ್ನು ಶ್ರೀ ಮಹಾಕಾಲ್ ಲೋಕ ಎಂದು ಹೆಸರಿಸಲಾಗಿದೆ. ಮೊದಲ ಹಂತದಲ್ಲಿ, ಮಹಾಕಾಲ್ ಪ್ಲಾಜಾ, ಮಹಾಕಾಲ್ ಕಾರಿಡಾರ್ ಮತ್ತು ಮಹಾಕಾಲ್ ಥೀಮ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗಿದೆ ಮತ್ತು ನಿರ್ಮಿಸಲಾಗಿದೆ. ಮಹಾಕಾಲ್ ಕಾರಿಡಾರ್‌ನಲ್ಲಿ ನಡೆಯಲು 200 ಮೀಟರ್ ಉದ್ದದ ವಾಕ್‌ವೇ ಮಾಡಲಾಗಿದೆ. ಇದು 25 ಅಡಿ ಎತ್ತರ ಮತ್ತು 500 ಮೀಟರ್ ಉದ್ದದ ಮ್ಯೂರಲ್ ಗೋಡೆಯನ್ನು ಹೊಂದಿದೆ. ಶಿವನ ವಿವಿಧ ಭಂಗಿಗಳನ್ನು ಹೊಂದಿರುವ 108 ಶಿವಸ್ತಂಭಗಳು ಸಹ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top