ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಶಶಿ ತರೂರ್ ಅವರು ಸ್ಪಷ್ಟಪಡಿಸಿದ್ದಾರೆ.
ನಾನು ಎಂದಿಗೂ ಸವಾಲುಗಳಿಂದ ಓಡಿ ಹೋಗುವುದಿಲ್ಲ, ಇದು ಪೂರ್ಣಗೊಳಿಸಬೇಕಾದ ಹೋರಾಟ ಎಂದಿದ್ದಾರೆ.
“ನಾನು ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂಬ ಬಗ್ಗೆ ವದಂತಿಗಳು ಹಬ್ಬಿದೆ. ನಾನು ಸವಾಲಿನಿಂದ ಹಿಂದೆ ಸರಿಯುವ ಮಾತೇ ಇಲ್ಲ” ಎಂದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ತರೂರ್, ಈ ಚುನಾವಣೆ ಪಕ್ಷದ ಒಳಗೆ ನಡೆಯುತ್ತಿರುವ ಸೌಹಾರ್ದಯುತ ಚುನಾವಣೆಯಾಗಿದ್ದು, ಸ್ಪರ್ಧೆಯನ್ನು ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಚುರುಕಾಗಿ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ತರೂರ್ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಖರ್ಗೆ ಗೆಲ್ಲುವ ನೆಚ್ಚಿನ ಅಭ್ಯರ್ಥಿಯಾಗಿದ್ದಾರೆ. ಆದರೆ ಅವರು ಗಾಂಧಿ ಪರಿವಾರದ ಕೈಗೊಂಬೆಯಾಗಲಿದ್ದಾರೆ ಎಂಬ ಮಾತುಗಳು ಈಗಲೇ ಕೇಳಿ ಬರಲಿದೆ.
Surprised to get calls saying that “sources in Delhi” claim that I have withdrawn! I am on this race till the finish. #ThinkTomorrowThinkTharoor pic.twitter.com/zF3HZ8LtH5
— Shashi Tharoor (@ShashiTharoor) October 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.