News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗುಜರಾತಿನಾದ್ಯಂತ ʼಕೇಜ್ರಿವಾಲ್‌ ಹಿಂದೂ ವಿರೋಧಿʼ ಬ್ಯಾನರ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಹಿಂದೂ ವಿರೋಧಿ” ಎಂದು ಕರೆದಿರುವ ಬ್ಯಾನರ್‌ಗಳು ಗುಜರಾತ್‌ನ ಹಲವಾರು ಪ್ರಮುಖ ನಗರಗಳಲ್ಲಿ ಇಂದು ಕಾಣಿಸಿಕೊಂಡಿವೆ.  ವಿಧಾನಸಭಾ ಚುನಾವಣೆಗಾಗಿ ಎಎಪಿ ನಾಯಕ ತಮ್ಮ ಪಕ್ಷದ ಪ್ರಚಾರಕ್ಕಾಗಿ ಆ ರಾಜ್ಯಕ್ಕೆ ಬಂದಿರುವ ಸಂದರ್ಭದಲ್ಲೇ ಈ ಬ್ಯಾನರ್‌ಗಳು ಕಾಣಿಸಿಕೊಂಡಿವೆ.

ಕೇಜ್ರಿವಾಲ್ ಅವರ ಚಿತ್ರಗಳ ಜೊತೆಗೆ, ಕೆಲವು ಬ್ಯಾನರ್‌ಗಳು “ನಾನು ಹಿಂದೂ ಧರ್ಮವನ್ನು ಹುಚ್ಚುತನವೆಂದು ಪರಿಗಣಿಸುತ್ತೇನೆ” ಎಂದು ಬರೆಯಲಾಗಿದೆ. ಇನ್ನು ಕೆಲವು “ಹಿಂದೂ ವಿರೋಧಿ ಕೇಜ್ರಿವಾಲ್ ಗೋ ಬ್ಯಾಕ್” ಎಂದು ಬರೆಯಲಾಗಿದೆ. ಬ್ಯಾನರ್‌ಗಳಲ್ಲಿ “ನಾನು ಹಿಂದೂ ಧರ್ಮವನ್ನು ಹುಚ್ಚುತನವೆಂದು ಪರಿಗಣಿಸುತ್ತೇನೆ”, “ನಾನು ಬ್ರಹ್ಮ, ವಿಷ್ಣು, ರಾಮ ಮತ್ತು ಕೃಷ್ಣನನ್ನು ನಂಬುವುದಿಲ್ಲ” ಮತ್ತು “ನಾನು ಶ್ರದ್ಧಾ ಪಿಂಡ ದಾನ’ ಅಥವಾ ಇತರ ಯಾವುದೇ ಹಿಂದೂ ಆಚರಣೆಗಳನ್ನು ಮಾಡುವುದಿಲ್ಲ” ಎಂದು ಬರೆಯಲಾಗಿದೆ.ಈ ಎಲ್ಲಾ ಬ್ಯಾನರ್‌ಗಳ ಕೆಳಗೆ ” ಇವು ಎಎಪಿಯ ಪದಗಳು ಮತ್ತು ಸಂಸ್ಕೃತಿ” ಎಂದು ಉಲ್ಲೇಖಿಸಲಾಗಿದೆ.

ಈ ಬ್ಯಾನರ್‌ಗಳು ಅಹಮದಾಬಾದ್, ರಾಜ್‌ಕೋಟ್, ಸೂರತ್ ಮತ್ತು ವಡೋದರಾ ನಗರಗಳಲ್ಲಿ ಕಾಣಿಸಿಕೊಂಡಿವೆ. ಆಮ್ ಆದ್ಮಿ ಪಕ್ಷದ ದೆಹಲಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು “ಧಾರ್ಮಿಕ ಮತಾಂತರ” ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳನ್ನು ಖಂಡಿಸುವ ಪ್ರಮಾಣ ವಚನ ಸ್ವೀಕರಿಸುತ್ತಿರುವುದನ್ನು ತೋರಿಸುವ ವಿಡಿಯೋ ತುಣುಕಿನ ಮೂಲಕ ಎಎಪಿ ವಿರುದ್ಧ ಆಕ್ರೋಶಗಳು ಭುಗಿಲೆದ್ದ ಬೆನ್ನಲ್ಲೇ ಈ ಬ್ಯಾನರ್‌ಗಳು ಕಾಣಿಸಿಕೊಂಡಿವೆ.

ಸಚಿವರ ನಡೆಯನ್ನು ಬಿಜೆಪಿ ಖಂಡಿಸಿದೆ ಮತ್ತು ಎಎಪಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top