News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜಸ್ಥಾನದಲ್ಲಿರುವುದು ಅದಾನಿ ಸರ್ಕಾರವೋ?: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಅವರ ವಿರುದ್ಧ ಸದಾ ಉರಿದು ಬೀಳುವ ಕಾಂಗ್ರೆಸ್ಸಿಗರಿಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಅವರು ಮುಜುಗರವನ್ನುಂಟು ಮಾಡಿದ್ದಾರೆ. ಅದಾನಿ ಅವರ ಜೊತೆ ಸಮಾರಂಭದಲ್ಲಿ ಭಾಗಿಯಾಗಿ ಅವರನ್ನು ‘ಭಾಯ್’ ಎಂದು ಕರೆದಿದ್ದಾರೆ.

ಅಲ್ಲದೆ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ ಎಂಬ ಪಟ್ಟ ಅಲಂಕರಿಸಿರುವುದಕ್ಕೆ ಅದಾನಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್ಸಿಗರಿಗೆ ಇರಿಸು ಮುರಿಸು ತಂದಿದೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಕಾಳೆಲೆದಿರುವ ಬಿಜೆಪಿ, “ನರೇಂದ್ರ ಮೋದಿ ಸರ್ಕಾರವನ್ನು ಅದಾನಿ ಅಂಬಾನಿ ಸರ್ಕಾರ ಎನ್ನುವ ರಾಹುಲ್ ಗಾಂಧಿ ಅವರೇ, ರಾಜಸ್ಥಾನದಲ್ಲಿರೋದು ಅದಾನಿ ಸರ್ಕಾರವೋ ಅಥವಾ ಕಾಂಗ್ರೆಸ್ ಸರ್ಕಾರವೋ?” ಎಂದು ಪ್ರಶ್ನೆ ಮಾಡಿದೆ.

ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೆಹಲೋಟ್ ಅವರು, ಕಾಂಗ್ರೆಸ್ ಪಕ್ಷ ಯಾವತ್ತೂ ಕೈಗಾರಿಕಾ ವಿರೋಧಿಯಲ್ಲ ಅದು ಹೂಡಿಕೆಯನ್ನು ಸ್ವಾಗತಿಸುತ್ತದೆ ಎಂದಿದ್ದಾರೆ.

ಇತರ ಕಾಂಗ್ರೆಸ್ ನಾಯಕರು ಕೂಡ ಗೆಹಲೋಟ್ ಅವರ ಸಮರ್ಥನೆಗೆ ನಿಂತಿದ್ದು, ಹೂಡಿಕೆಯನ್ನು ಯಾರು ವಿರೋಧ ಮಾಡುವುದಿಲ್ಲ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top