News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ನಗರ ನಕ್ಸಲರು ಹೊಸ ರೂಪದಲ್ಲಿ ಗುಜರಾತ್ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ: ಮೋದಿ

ಅಹ್ಮದಾಬಾದ್: ನಗರ ನಕ್ಸಲರು ಹೊಸ ರೂಪಗಳಲ್ಲಿ ಗುಜರಾತ್ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

2014 ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗ ಭಾರತದ ಆರ್ಥಿಕತೆಯು ವಿಶ್ವದಲ್ಲಿ 10 ನೇ ಸ್ಥಾನದಲ್ಲಿತ್ತು ಮತ್ತು ಅದು ಈಗ ಐದನೇ ಸ್ಥಾನಕ್ಕೆ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶದ ಮೊದಲ ಬೃಹತ್ ಡ್ರಗ್ ಪಾರ್ಕ್‌ಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ಮಾತನಾಡಿದರು.

‘ನಗರ ನಕ್ಸಲರು’ ತಮ್ಮ ರೂಪವನ್ನು ಬದಲಿಸುವ ಮೂಲಕ ಗುಜರಾತ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಯುವಕರ ಜೀವನವನ್ನು ನಾಶಮಾಡಲು ರಾಜ್ಯವು ಅವರಿಗೆ ಅವಕಾಶ ನೀಡುವುದಿಲ್ಲ” ಎಂದು ಮೋದಿ ಹೇಳಿದ್ದಾರೆ.

“ಅರ್ಬನ್ ನಕ್ಸಲರು ಹೊಸ ರೂಪಗಳೊಂದಿಗೆ ರಾಜ್ಯವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ತಮ್ಮ ವೇಷಭೂಷಣಗಳನ್ನು ಬದಲಾಯಿಸಿದ್ದಾರೆ. ಅವರು ನಮ್ಮ ಮುಗ್ಧ ಮತ್ತು ಶಕ್ತಿಯುತ ಯುವಕರನ್ನು  ದಾರಿ ತಪ್ಪಿಸುತ್ತಿದ್ದಾರೆ” ಎಂದು ಮೋದಿ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಪರೋಕ್ಷ ದಾಳಿ ನಡೆಸಿದ್ದಾರೆ.

“ಅರ್ಬನ್ ನಕ್ಸಲರು ಮೇಲಿಂದ ಮೇಲೆ ಕಾಲಿಡುತ್ತಿದ್ದಾರೆ, ನಮ್ಮ ಯುವ ಪೀಳಿಗೆಯನ್ನು ನಾಶಮಾಡಲು ನಾವು ಬಿಡುವುದಿಲ್ಲ, ದೇಶವನ್ನು ನಾಶಮಾಡುವ ಕೆಲಸಕ್ಕೆ ಕೈ ಹಾಕಿರುವ ಅರ್ಬನ್ ನಕ್ಸಲರ ವಿರುದ್ಧ ನಾವು ನಮ್ಮ ಮಕ್ಕಳನ್ನು ಎಚ್ಚರಿಸಬೇಕು. ಅವರು ವಿದೇಶಿ ಶಕ್ತಿಗಳ ಏಜೆಂಟ್‌ಗಳು” ಎಂದು ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top