News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಮತಾಗೆ ಆಘಾತ: ಮತ್ತೊಬ್ಬ ಟಿಎಂಸಿ ಶಾಸಕನನ್ನು ಬಂಧಿಸಿದ ಇಡಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿ, ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಂಗಳವಾರ ಟಿಎಂಸಿ ಶಾಸಕ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಮಾಣಿಕ್ ಭಟ್ಟಾಚಾರ್ಯ ಅವರನ್ನು  ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಭಟ್ಟಾಚಾರ್ಯ ಅವರನ್ನು ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ

ಭಟ್ಟಾಚಾರ್ಯ ರಾಜ್ಯ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದಾರೆ ಮತ್ತು ಜೂನ್‌ನಲ್ಲಿ ಕಲ್ಕತ್ತಾ ಹೈಕೋರ್ಟ್‌ ಅವರನ್ನು ಸ್ಥಾನದಿಂದ ತೆಗೆದುಹಾಕಿತ್ತು. ಇವರು ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ಥ ಚಟರ್ಜಿ ನಂತರ ಬಂಧನಕ್ಕೊಳಗಾದ ಎರಡನೇ ಉನ್ನತ ಟಿಎಂಸಿ ಶಾಸಕರಾಗಿದ್ದಾರೆ. ರಾಜ್ಯ ಪ್ರಾಥಮಿಕ ಶಿಕ್ಷಕರನ್ನು ನೇಮಿಸಲು ನಡೆಸಿದ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಕಂಡುಬಂದಿರುವ ಅವ್ಯವಹಾರಗಳಲ್ಲಿ ಭಟ್ಟಾಚಾರ್ಯ ಅವರ ಪಾತ್ರವಿದೆ ಎಂದು ಆರೋಪಿಸಿ ಸಿಬಿಐ ಆಗಸ್ಟ್‌ನಲ್ಲಿ ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿತ್ತು.

ಹಗರಣದಲ್ಲಿ ಭಟ್ಟಾಚಾರ್ಯ ಹೆಸರು ಕೇಳಿಬಂದ ಕೂಡಲೇ ಅವರಿಗೆ ಇನ್ನು ಮುಂದೆ ಪೊಲೀಸ್ ಭದ್ರತೆ ನೀಡುವುದಿಲ್ಲ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ. ಶಿಕ್ಷಕರ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ಭಟ್ಟಾಚಾರ್ಯ ಅವರನ್ನು ತೆಗೆದುಹಾಕುವಂತೆ ಕಲ್ಕತ್ತಾ ಹೈಕೋರ್ಟ್ ಈ ಹಿಂದೆ ಆದೇಶಿಸಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ (ಡಬ್ಲ್ಯುಬಿಎಸ್‌ಎಸ್‌ಸಿ) ಮಾಜಿ ಸಲಹೆಗಾರ ಶಾಂತಿ ಪ್ರಸಾದ್ ಸಿನ್ಹಾ, ಡಬ್ಲ್ಯುಬಿಎಸ್‌ಎಸ್‌ಸಿ ಮಾಜಿ ಅಧ್ಯಕ್ಷ ಅಶೋಕ್ ಸಹಾ ಮತ್ತು ಡಬ್ಲ್ಯುಬಿಎಸ್‌ಎಸ್‌ಸಿ ಮಾಜಿ ಅಧ್ಯಕ್ಷ ಕಲ್ಯಾಣ್‌ಮೋಯ್ ಗಂಗೂಲಿ ಅವರನ್ನು ಕೂಡ ಸಿಬಿಐ ಬಂಧಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top