News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎರಡು ಗುಂಡೇಟು ಬಿದ್ದರೂ ಉಗ್ರರ ವಿರುದ್ಧ ಹೋರಾಡಿದ ಸೇನೆಯ ಶ್ವಾನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಸೇನೆಯ ಶ್ವಾನ ತೀವ್ರವಾಗಿ ಗಾಯಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ದಕ್ಷಿಣ ಕಾಶ್ಮೀರ ಜಿಲ್ಲೆಯ ತಂಗ್ಪಾವಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.

ಸೋಮವಾರ ಬೆಳಗ್ಗೆ ಸೇನೆಯು ಉಗ್ರರು ಅಡಗಿರುವ ಮನೆಯೊಳಗೆ ಜೂಮ್ ಎಂಬ ತನ್ನ ಆಕ್ರಮಣಕಾರಿ ನಾಯಿಯನ್ನು ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಜೂಮ್ ಹೆಚ್ಚು ತರಬೇತಿ ಪಡೆದ, ಆಕ್ರಮಣಕಾರಿ ಮತ್ತು ಹೆಚ್ಚು ಬದ್ಧತೆಯ ಶ್ವಾನ. ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಕೆಳಕ್ಕುರುಳಿಸಲು ತರಬೇತಿ ನೀಡಲಾಗಿದೆ” ಎಂದು ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿ ಜೂಮ್ ಅನೇಕ ಸಕ್ರಿಯ ಕಾರ್ಯಾಚರಣೆಗಳ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.

ಸೋಮವಾರ, ಎಂದಿನಂತೆ, ಭಯೋತ್ಪಾದಕರು ಅಡಗಿರುವ ಮನೆಯನ್ನು ತೆರವುಗೊಳಿಸಲು ಜೂಮ್ ಅನ್ನು ನಿಯೋಜಿಸಲಾಗಿದೆ. ಕಾರ್ಯಾಚರಣೆಯ ಸಮಯದಲ್ಲಿ, ಶ್ವಾನಕ್ಕೆ ಎರಡು ಗುಂಡುಗಳು ತಗಲಿವೆ ಮತ್ತು ಅದು ತೀವ್ರವಾಗಿ ಗಾಯಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಜೂಮ್ ಭಯೋತ್ಪಾದಕರನ್ನು ಗುರುತಿಸಿ ದಾಳಿ ಮಾಡಿತು, ಈ ಸಮಯದಲ್ಲಿ ಎರಡು ಗುಂಡೇಟುಗಳು ಬಿತ್ತು” ಎಂದಿದ್ದಾರೆ.

ಆದರೂ ಶ್ವಾನ ಹೋರಾಡುತ್ತಲೇ ಇತ್ತು ಮತ್ತು ತನ್ನ ಕಾರ್ಯವನ್ನು ನಿರ್ವಹಿಸುತ್ತಲೇ ಇತ್ತು, ಇದು ಇಬ್ಬರು ಉಗ್ರಗಾಮಿಗಳ ಹತ್ಯೆಗೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ತೀವ್ರವಾದ ಗಾಯಗಳ ನಡುವೆಯೂ, ಕೆಚ್ಚೆದೆಯ ಸೈನಿಕನು ತನ್ನ ಕಾರ್ಯವನ್ನು ಮುಂದುವರೆಸಿದನು, ಇದರ ಪರಿಣಾಮವಾಗಿ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಯಿತು” ಎಂದು ಅಧಿಕಾರಿಗಳು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top