News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಹಾಕಾಲ್‌ ಕಾರಿಡಾರ್‌ ಉದ್ಘಾಟನೆ: ಮಧ್ಯಪ್ರದೇಶದ ದೇಗುಲಗಳಲ್ಲಿ ವಿಶೇಷ ಪ್ರಾರ್ಥನೆ

ಭೋಪಾಲ್: ಉಜ್ಜಯಿನಿಯಲ್ಲಿ ಇಂದು ಸಂಜೆ ‘ಶ್ರೀ ಮಹಾಕಾಲ್ ಲೋಕ’ ಕಾರಿಡಾರ್‌ನ ಮೊದಲ ಹಂತವನ್ನು  ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಗೌರವಾರ್ಥವಾಗಿ ಮಧ್ಯಪ್ರದೇಶದ ಎಲ್ಲಾ ಗ್ರಾಮಗಳು ಮತ್ತು ನಗರಗಳಲ್ಲಿನ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆಯಲಿವೆ.

ಎಲ್ಲಾ ಗ್ರಾಮದ ಒಂದು ದೇವಸ್ಥಾನದಲ್ಲಿ ಸ್ಥಳೀಯರು ಸೇರಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಉಜ್ಜಯಿನಿಯಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದ ಜೊತೆಗೆ ನಗರ ಪ್ರದೇಶದ ಪ್ರತಿ ವಾರ್ಡ್‌ನಲ್ಲಿರುವ ದೊಡ್ಡ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಅಲ್ಲದೇ ದೇವಾಲಯಗಳ ಸ್ಥಳಗಳಲ್ಲಿ ಎಲ್ಇಡಿ ಪರದೆಗಳಲ್ಲಿ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುವುದು ಎಂದು ಅದು ಹೇಳಿದೆ.

ಅಲ್ಲದೆ, ಉಜ್ಜಯಿನಿ ಮತ್ತು ಇಂದೋರ್ ವಿಭಾಗದ ಪ್ರತಿ ಗ್ರಾಮ ಪಂಚಾಯಿತಿಯಿಂದ ಭಕ್ತರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಮತ್ತು ಪ್ರಧಾನಿ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್‌ನ ಮೊದಲ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸುವುದನ್ನು ಕಣ್ತುಂಬಿಕೊಳ್ಳಲಿದ್ದಾರೆ.

ಉಜ್ಜಯಿನಿಯ ಕಾರ್ತಿಕ ಮೇಳ ಮೈದಾನದಲ್ಲಿ 60,000 ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ, ಉಜ್ಜಯಿನಿಯ ಶಿಪ್ರಾ ನದಿಯ ಎಲ್ಲಾ ಘಾಟ್‌ಗಳಲ್ಲಿ ಹಾಕಲಾದ ಎಲ್‌ಇಡಿ ಪರದೆಯಲ್ಲಿ ಸುಮಾರು ಒಂದು ಲಕ್ಷ ಭಕ್ತರು ಕಾರ್ಯಕ್ರಮ ವೀಕ್ಷಿಸುತ್ತಾರೆ ಎಂದು ಪ್ರಕಟಣೆ ಹೇಳಿದೆ.

ರಾಜ್ಯ ಸರ್ಕಾರ ನಿರ್ವಹಿಸುವ ಎಲ್ಲಾ ಧಾರ್ಮಿಕ ಸ್ಥಳಗಳನ್ನು ದೀಪಾಲಂಕಾರ ಮಾಡುವ ಮೂಲಕ ಬೆಳಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ದಮೋಹ್ ಜಿಲ್ಲೆಯ ಬಂದಕ್‌ಪುರ ದೇವಸ್ಥಾನ ಮತ್ತು ಛತ್ತರ್‌ಪುರದ ಜಟಾಶಂಕರ ದೇವಸ್ಥಾನ ಸೇರಿದಂತೆ ಶಿವನಿಗೆ ಸಮರ್ಪಿತವಾಗಿರುವ ರಾಜ್ಯದ ಎಲ್ಲಾ ದೊಡ್ಡ ದೇವಾಲಯಗಳಲ್ಲಿ ಸಾಂಸ್ಕೃತಿಕ ಮತ್ತು ಭಕ್ತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top